ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ‘ಬೆಳಕು’ ಕಾರ್ಯಕ್ರಮ

0

ಬೆಳ್ತಂಗಡಿ: ಪಿಲಿಗೂಡು ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿಯ ಕುರಿತು ಬೆಳಕು ಎನ್ನುವ ಹೆಸರಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಫೆ. 28 ರಂದು ಸಂಪನ್ಮೂಲ ವ್ಯಕ್ತಿ, ಬಹುಮುಖ ಪ್ರತಿಭೆ ಚಂದ್ರಹಾಸ್ ಬಳಂಜ ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೇಡಿ ಜೆಸಿ ಸಂಯೋಜಕಿ ಜೆಸಿ ಮಮಿತಾ ಸುಧೀರ್ ವಹಿಸಿಕೊಂಡರು. ಮುಖ್ಯ ಅತಿಥಿಯಾಗಿ ಪಿಲಿಗೂಡು ಸರ್ಕಾರಿ ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಅನಿತಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಹುಮುಖ ಪ್ರತಿಭೆಯುಳ್ಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಜೆಸಿ ಶಂಕರ್ ರಾವ್ ಸಭೆಗೆ ಪರಿಚಯಿಸಿದರು. ಮಹಿಳಾ ವಿಭಾಗದ ನಿರ್ದೇಶಕಿ ಶ್ರೀಮತಿ ಸುಭಾಷಿಣಿ ಗೌರವಾನ್ವಿತರನ್ನ ವೇದಿಕೆಗೆ ಆಹ್ವಾನಿಸಿದರು. ಜೆಜೆಸಿ ಸೃಷ್ಟಿ ಜೆಸಿ ವಾಣಿ ವಾಚಿಸಿದರು. ಜೆಸಿಐ ಬೆಳ್ತಂಗಡಿ ಮಂಜುಶ್ರೀ ಕಾರ್ಯದರ್ಶಿ ಜೆಸಿ ಸುಧೀರ್ ಕೆ ಎನ್ ವಂದಿಸಿದರು.

LEAVE A REPLY

Please enter your comment!
Please enter your name here