Site icon Suddi Belthangady

ನಾವೂರು: ಬಿಲ್ಲವ ಸಂಘದಿಂದ ಶ್ರೀ ಗುರು ಪೂಜೆ, ಕ್ರೀಡಾಕೂಟ

ನಾವೂರು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ನಾವೂರು,ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ನಾವೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಗುರುಪೂಜೆ ಮತ್ತು ಕ್ರೀಡಾಕೂಟವು ನಾವೂರು ಶಾಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ವಸಂತ ಪೂಜಾರಿ ಇಡ್ಯಾಲ ವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಬಂಗಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ತಾಲೂಕು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೇಶ್ ಹೆಚ್ ಕೋಟ್ಯಾನ್, ಮಹಿಳಾ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘದ ನಿರ್ದೇಶಕಿ ಪ್ರೇಮಾ ಉಮೇಶ್, ತಾಲೂಕು ಮಹಿಳಾ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷೆ ತನುಜಾ ಶೇಖರ್ ಉಪಸ್ಥಿತರಿದ್ದರು.

ರಜತ್ ಪೂಜಾರಿ ಮೋರ್ತಾಜೆ ಸ್ವಾಗತಿಸಿ, ಸತೀಶ್ ಸಾಲಿಯಾನ್ ಮೋರ್ತಾಜೆ ನಿರೂಪಿಸಿ, ಕೃಷ್ಣಪ್ಪ ಬೋಂಟ್ರಪಾಲು ವಂದಿಸಿದರು.

ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಕ್ರೀಡಾಕೂಟಗಳು ಜರುಗಿದವು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಗುರುಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಮಿತಿ ಪದಾಧಿಕಾರಿಗಳು ಸಹಕರಿಸಿದರು.

Exit mobile version