ಪದ್ಮುಂಜ ಸೊಸೈಟಿಯ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡದ ಉದ್ಘಾಟನೆ

0

ಕಣಿಯೂರು: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಪದ್ಮುಂಜದಲ್ಲಿ ನಿರ್ಮಿಸಲಾಗಿರುವ ರೈತ ಸಭಾಭವನ ಹಾಗೂ ರೈತ ಗೋದಾಮು ಕಟ್ಟಡದ ಉದ್ಘಾಟನಾ ಸಮಾರಂಭವು ಮಾ.2 ರಂದು ಜರುಗಿತು.
ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ವಹಿಸಿದ್ದರು. ಕಾರ್ಯಕ್ರಮದಲ್ಲಿ ರೈತ ಸಭಾಭವನವನ್ನು ಹಾಗೂ ರೈತ ಗೋದಾಮು ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್ ಉದ್ಘಾಟಿಸಿದರು.


ಕ್ಯಾಂಪ್ಕೊ ಶಾಖೆಯನ್ನು ಕ್ಯಾಂಪ್ಕೊ ನಿರ್ದೇಶಕ ಕೃಷ್ಣ ಪ್ರಸಾದ್ ಮತ್ತಿಲ, ನವೀಕೃತ ಪ್ರಧಾನ ಕಛೇರಿಯ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಹಣಾಧಿಕಾರಿ ಡಾ| ಎಲ್.ಹೆಚ್ ಮಂಜುನಾಥ್ , ಮೀಟಿಂಗ್ ಹಾಲ್ ನ್ನು ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ನಿರಂಜನ್ ಭಾವಂತಬೆಟ್ಟು ,ಕೃಷಿ ಯಂತ್ರ ಮೇಳ ವನ್ನು ಡಿ.ಸಿ.ಸಿ ಬ್ಯಾಂಕಿನ ಪುತ್ತೂರು ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದ.ಕ ಹಾಲು ಒಕ್ಕೂಟದ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಬೆಳ್ತಂಗಡಿ ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಸೋಮನಾಥ ವರ್ಪಾಳೆ ಬಂಗೇರ, ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಸುಂದರ ಗೌಡ ಇಚ್ಚಿಲ, ಸಹಕಾರ ಸಂಘಗಳ ಉಪನಿಬಂಧಕರಾದ ಡಾ| ರಮೇಶ್ ಎಚ್.ಎನ್, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್, ಬೆಳ್ತಂಗಡಿ ಸಿ.ಡಿ.ಒ. ಬಿ.ವಿ ಪ್ರತಿಮಾ ಉಪಸ್ಥಿತರಿದ್ದರು. ಕಣಿಯೂರು ಗ್ರಾ.ಪಂ ಅಧ್ಯಕ್ಷೆ ಗಾಯತ್ರಿ ಗೋಪಾಲ ಗೌಡ, ಬಂದಾರು ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಗೌಡ ಪುಯಿಲ, ಪದ್ಮುಂಜ ಹಾಲು ಸೊಸೈಟಿ ಅಧ್ಯಕ್ಷ ಬಾಬುಗೌಡ, ಕಣಿಯೂರು ಹಾಲು ಸೊಸೈಟಿ ಅಧ್ಯಕ್ಷೆ ಕುಸುಮಾವತಿ, ಬೈಪಾಡಿ ಹಾಲು ಸೊಸೈಟಿ ಅಧ್ಯಕ್ಷ ಉಮೇಶ್ ಗೌಡ, ಬಂದಾರು ಹಾಲು ಸೊಸೈಟಿ ಅಧ್ಯಕ್ಷೆ ಮಮತಾ ಗೌಡ ಕೆಲೆಂಜಿಮಾರು, ಬುಳೇರಿಮೊಗ್ರು ಹಾಲು ಸೊಸೈಟಿ ಅಧ್ಯಕ್ಷ ಸದಾನಂದ ಪೂಜಾರಿ, ಬಂದಾರು ಗ್ರಾ.ಪಂ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಕಣಿಯೂರು ಗ್ರಾ.ಪಂ ಉಪಾಧ್ಯಕ್ಷೆ ಜಲಜಾಕ್ಷಿ ಗೌರವ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘಪತಿ ಕೆ. ಹಾಗೂ ಎಲ್ಲಾ ನಿರ್ದೆಶಕರುಗಳು, ಸಿಬ್ಬಂದಿವರ್ಗ, ಸದಸ್ಯರು ಹಾಜರಿದ್ದು ಸಹಕರಿಸಿದ್ದರು.

LEAVE A REPLY

Please enter your comment!
Please enter your name here