ಮಾಯ ದೇವಸ್ಥಾನದ ಜಾತ್ರಾಮಹೋತ್ಸವ ಊರವರಿಂದ ಹೊರೆಕಾಣಿಕೆ ಸಮರ್ಪಣೆ

0

ಬೆಳಾಲು : ಶ್ರೀ ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಮಾ.3 ರಿಂದ 7 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಇದರ ಅಂಗವಾಗಿ ಊರವರು ಹೊರಕಾಣಿಕೆ ಮೆರವಣಿಗೆ ಮೂಲಕ ಮಾ.3 ರಂದು ಸಮರ್ಪಿಸಿದರು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಚ್. ಪದ್ಮ ಗೌಡ, ಮಾಯ ಗುತ್ತು ಪುಷ್ಪದಂತ ಜೈನ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಜನಾ ಮಂಡಳಿ, ವರಮಹಾಲಕ್ಷ್ಮಿ ಪೂಜಾ ಸಮಿತಿ, ಮಾಯ ಫ್ರೆಂಡ್ಸ್ ಪದಾಧಿಕಾರಿಗಳು, ಸದಸ್ಯರು, ಊರವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವತಿಯಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ, ಆಡಳಿತ ಮೊಕ್ತೇಸರ ಜೀವಂಧರ ಕುಮಾರ್ ಜೈನ್ ಬೆಳಾಲು ಗುತ್ತು ಮತ್ತು ಸಮಿತಿ ಸದಸ್ಯರ ನೇತೃತ್ವದಲ್ಲಿ ಮೆರವಣಿಗೆ ಮೂಲಕ ಬಂದು ಹೊರೆಕಾಣಿಕೆ ಸಮರ್ಪಿಸಿದರು.

ಮಾಯ ದೇವಸ್ಥಾನದ ವತಿಯಿಂದ ಸಮಿತಿ ಅಧ್ಯಕ್ಷರು, ಸದಸ್ಯರು, ಅರ್ಚಕರು, ಊರವರು ಸ್ವಾಗತಿಸಿದರು.

LEAVE A REPLY

Please enter your comment!
Please enter your name here