ಕೊಕ್ಕಡದಲ್ಲಿ ಕರಾವಳಿ ಪ್ರಜಾಧ್ವನಿ ಯಾತ್ರೆ

0

ಕೊಕ್ಕಡ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನೇತ್ರತ್ವದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಆಯೋಜಿಸಿದ ಕರಾವಳಿ ಪ್ರಜಾಧ್ವನಿ ಯಾತ್ರೆಯು ಮಾ.3ರಂದು ಕೊಕ್ಕಡ ಅಪೇಕ್ಷ ಕಾಂಪ್ಲೆಕ್ಸ್ ಬಳಿ ಜರಗಿತು.

ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಮೇಲ್ಮನೆ ವಿರೋಧ ಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್ , ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಶಾಸಕರಾದ ಕೆ ವಸಂತ ಬಂಗೇರ, ವಿಧಾನ ಪರಿಷತ್ ಸದಸ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಉಸ್ತುವಾರಿ ಕೃಷ್ಣ ಮೂರ್ತಿ, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಶಶಿಧರ್ ಹೆಗ್ಡೆ, ರಾಜಶೇಖರ್ ಅಜ್ರಿ, ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್, ಸಾಹಿದ್ ತೆಕ್ಕಿಲ, ಸುಭಾಶ್ಚಂದ್ರ, ಅಬ್ದುಲ್ ರಹೀಮಾನ್ ಪಡ್ಪು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಸದಸ್ಯರು ಉಪಸ್ಥಿತರಿದ್ದರು. ರಂಜನ್ ಜಿ. ಗೌಡ ಸ್ವಾಗತಿಸಿದರು.

LEAVE A REPLY

Please enter your comment!
Please enter your name here