ಮಾಯ ದೇವಸ್ಥಾನ ಜಾತ್ರಾ ಮಹೋತ್ಸವದಲ್ಲಿ ರಾಮಕೃಷ್ಣ ಭಟ್ ಬೆಳಾಲು ರವರಿಗೆ ಸನ್ಮಾನ

0

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಅವರ ಶೈಕ್ಷಣಿಕ, ಸಾಹಿತ್ಯ ಮತ್ತು ಸಾಮಾಜಿಕ ಸೇವೆಗಾಗಿ ಮತ್ತು ಇತ್ತೀಚೆಗೆ ರಾಜ್ಯ ಮಟ್ಟದ ಅನಿತಾ ಕೌಲ್ ಉತ್ತಮ ಶಿಕ್ಷಕ ಗೌರವಕ್ಕೆ ಪಾತ್ರರಾಗಿ ಮಾಡಿದ ವಿಶೇಷ ಸಾಧನೆಗಾಗಿ, ಶ್ರೀ ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಶ್ರೀ ಮಾಯ ಮಹಾದೇವ ಭಕ್ತ ವೃಂದದವರಿಂದ ಈ ಸನ್ಮಾನ ಕಾರ್ಯಕ್ರಮ ಜರಗಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎಚ್. ಪದ್ಮ ಗೌಡರವರು ನಡೆಸಿದರು. ವೇದಿಕೆಯಲ್ಲಿ ಸನ್ಮಾನ ಕಾರ್ಯಕ್ರಮದ ಸಂಯೋಜಕರು ಮತ್ತು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಶಿವಕುಮಾರ್ ಬಾರಿತ್ತಾಯ ಪಾರಳ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ನಾಣ್ಯಪ್ಪ ಪೂಜಾರಿ, ದಿನೇಶ್ ಎಂ ಕೆ , ಖ್ಯಾತ ನಾಟಕ ಕಲಾವಿದ ಮಂದಾರ ಸುಂದರ ರೈಯವರು ಉಪಸ್ಥಿತರಿದ್ದರು. ಶಿಕ್ಷಕರಾದ ಮಹೇಶ್ ಪುಳಿತ್ತಡಿಯವರು ಕಾರ್ಯಕ್ರಮ ನಿರೂಪಿಸಿದರು.
ಪ್ರತೀ ವರ್ಷ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ವಿಶೇಷ ಸಾಧಕರನ್ನು ಗೌರವಿಸುವ ಕಾರ್ಯಕ್ರಮವನ್ನು ಭಕ್ತ ವೃಂದದವರ ನಡೆಸಿಕೊಂಡು ಬರುತ್ತಿದ್ದಾರೆ.

LEAVE A REPLY

Please enter your comment!
Please enter your name here