ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

0

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಜೆಂಡರ್ ಈಕ್ವಿಲಿಟಿ ವಿಷಯದ ಕುರಿತು ಟಾಕ್ ಶೋ ಇತ್ತೀಚೆಗೆ ನಡೆಸಲಾಯಿತು.

ಕಾರ್ಯಗಾರವನ್ನು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಮಹಾಬಲ ಗೌಡ ವಿದ್ಯಾರ್ಥಿನಿಯರಿಗೆ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಪಾಲ್ಗೊಂಡಿದ್ದರು. ಮಹಿಳಾ ವಿಭಾಗದ ಸಂಯೋಜಕರಾದ ಜೇಸಿ ಮಮಿತಾ ಸುಧೀರ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಪ್ತಾಹ ಸಂಯೋಜಕರಾದ ಜೇಸಿ ದೀಕ್ಷಾ ಗಣೇಶ್ ಸಂಪನ್ಮೂಲ ವ್ಯಕ್ತಿಗಳ ಪರಿಚಯ ವಾಚಿಸಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್, ಮತ್ತು ಕಾರ್ಯದರ್ಶಿ ಜೇಸಿ ಸುಧೀರ್ ಕೆ. ಎನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here