ಸಾವ್ಯ: ರೂ.2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸೇತುವೆ ಕಾಮಗಾರಿಗೆ ಶಿಲಾನ್ಯಾಸ

0

ಸಾವ್ಯ: ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಠಿಯನ್ನಿಟ್ಟುಕೊಂಡು ತಾಲೂಕಿನ ಎಲ್ಲಾ 81 ಗ್ರಾಮಗಳ ರಸ್ತೆ, ನೀರು, ವಿದ್ಯುತ್ ಹೀಗೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತನ್ನು ನೀಡಿ ಇಂದು ತಾಲೂಕಿನಾಧ್ಯಂತ 400 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲನ್ಯಾಸ ನೆರವೇರಿಸಲಾಗುತ್ತಿದೆ.

ಈ ಕಾರ್ಯಕ್ರಮದ ಮೊದಲ ಶಿಲಾನ್ಯಾಸವನ್ನು ಸಾವ್ಯ ಗ್ರಾಮದ ಕರೆಂಬಿಲೆಕ್ಕಿ ಎಂಬಲ್ಲಿ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸೇತುವೆ ಕಾಮಗಾರಿಗೆ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಊರವರು, ಪಂಚಾಯತ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here