ಎಸ್ ಡಿ ಎಂ ಕಾಲೇಜು ಪತ್ರಿಕೋದ್ಯಮ ವಿಭಾಗಕ್ಕೆ ಟಿಎನ್ ಐಟಿ ಪ್ರಶಸ್ತಿ ಗರಿ

0

ಬೆಂಗಳೂರು- ಮಾಧ್ಯಮ ಲೋಕದಲ್ಲಿ ಮಾಡಿರುವ ವಿಶೇಷ ಸಾಧಕರನ್ನು ಗೌರವಿಸುವ ನಿಟ್ಟಿನಲ್ಲಿ ದಿ ನ್ಯೂಸ್ ಇಂಡಿಯನ್ ಟೈಮ್ಸ್ ಸಂಸ್ಥೆ ಪ್ರತಿವರ್ಷ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಎಸ್ ಡಿ ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ಅತ್ಯುತ್ತಮ ಪತ್ರಿಕೋದ್ಯಮ ವಿಭಾಗ ಪ್ರಶಸ್ತಿ ಲಭಿಸಿದೆ.


ಅತ್ಯುತ್ತಮ ಪತ್ರಿಕೋದ್ಯಮ ಕಲಿಕಾ ಕೇಂದ್ರ ಪ್ರಶಸ್ತಿ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಪತ್ರಿಕೋದ್ಯಮ ವಿಭಾಗದಲ್ಲಿ ಕಲಿತು ವಿವಿಧ ಪತ್ರಿಕೆ,ವಾಹಿನಿಗಳಲ್ಲಿ ನೂರಾರು ಮಂದಿ ಪತ್ರಕರ್ತರಾಗಿ ದುಡಿಯುತ್ತಿದ್ದಾರೆ. ಪ್ರತಿವರ್ಷ ಪತ್ರಿಕಾ ಸಂಸ್ಥೆಗಳ ಆಡಳಿತ ಮಂಡಳಿ, ವಾಹಿನಿಗಳ ಆಡಳಿತ ಮಂಡಳಿಯವರು ಇಲ್ಲಿನ ವಿದ್ಯಾರ್ಥಿಗಳನ್ನು ಸಂದರ್ಶಿಸಿ ತಮ್ಮ ಸಂಸ್ಥೆಗೆ ಆಯ್ಕೆ ಮಾಡಿಕೊಳ್ಳುತ್ತಾರೆ. ಪ್ರತಿಷ್ಠಿತ ವಾಹಿನಿಗಳಲ್ಲಿ ಕೆಲಸ ಮಾಡಲು ಬೇಕಾದ ಅರ್ಹತೆಗಳನ್ನು ವಿದ್ಯಾರ್ಥಿಗಳಲ್ಲಿ ಅಧ್ಯಯನದ ಮೂಲಕ ತುಂಬಿಸುತ್ತಿದ್ದಾರೆ.


ಇದಕ್ಕಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಪತ್ರಿಕೋದ್ಯಮ ವಿಭಾಗಕ್ಕೆ ಟಿಎನ್ ಐಟಿ ಅತ್ಯುತ್ತಮ ಪತ್ರಿಕೋದ್ಯಮ ಅಧ್ಯಯನ ಕೇಂದ್ರ ಎಂಬ ಪ್ರಶಸ್ತಿ ನೀಡಿ ಗೌರವಿಸಿದೆ. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಭಾಸ್ಕರ್ ಹೆಗ್ಡೆಯವರು ಬೆಂಗಳೂರಿನಲ್ಲಿ ಪ್ರಶಸ್ತಿ ಸ್ವೀಕರಿಸಿದ್ರು. ಈ ವೇಳೆ ವಿಭಾಗದ ಹಳೇ ವಿದ್ಯಾರ್ಥಿಗಳು, ಈಗ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಜೊತೆಗಿದ್ದರು.

LEAVE A REPLY

Please enter your comment!
Please enter your name here