Site icon Suddi Belthangady

ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಕೆ.ಎಸ್. ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪ್ರದಾನ

ನ್ಯಾಯತರ್ಫು: ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆದ 2022-23ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತಿ ವರ್ಷ ನೀಡಲಾಗುವ ಜಿಲ್ಲಾ ಮಟ್ಟದ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಕಣಿಯೂರು ವಲಯದ ರಕ್ತೇಶ್ವರಿ ಪದವು ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಕೆ.ಎಸ್. ಇವರಿಗೆ ನೀಡಿ ಗೌರವಿಸಲಾಯಿತು.


ಅವರು ಕಳೆದ 28 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಅಂಗನವಾಡಿಯಲ್ಲಿ ಹಮ್ಮಿಕೊಂಡ ವಿವಿಧ ಚಟುವಟಿಕೆಗಳು ಉತ್ತಮ ಸೇವೆ ಹಾಗೂ ಆವರ ಸೇವಾ ಮನೋಭಾವವನ್ನು ಗುರುತಿಸಿ ಇಲಾಖೆ ಜಿಲ್ಲಾ ಮಟ್ಟದ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ನೀಡಿ ಗೌರವಿಸಲು ಆಯ್ಕೆ ಮಾಡಲಾಯಿತು. ಇವರು ಕಳಿಯ ಗ್ರಾ.ಪಂ 2 ವರ್ಷ ಉಪಾಧ್ಯಕ್ಷೆಯಾಗಿ, 1ತಿಂಗಳ ಕಾಲ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ನ್ಯಾಯತರ್ಪು ಗ್ರಾಮದ ವಂಜಾರೆ ಪ್ರಗತಿಪರ ಕೃಷಿಕ ಜನಾರ್ದನ ಪೂಜಾರಿ ಯವರ ಪತ್ನಿ ಯಾಗಿರುತ್ತಾರೆ.

Exit mobile version