ಬೆಳ್ತಂಗಡಿ ಸ್ಪಂದನಾ ಸೇವಾ ಸಂಘದ ವತಿಯಿಂದ ಧನಸಹಾಯ

0

ಬೆಳ್ತಂಗಡಿ: ಶಿಬಾಜೆ ಗ್ರಾಮದ ಪೆರ್ಲ ನಿವಾಸಿ ನೀಲಮ್ಮ ಇವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ಸಹಾಯಾರ್ಥವಾಗಿ ರೂ.10,000 ದ ಚೆಕ್ಕನ್ನು ಹಾಗೂ ಉಜಿರೆ ಗ್ರಾಮದ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಜಾನಕಿ ಇವರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಇವರ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸಾ ಸಹಯಾರ್ಥವಾಗಿ ರೂ.10,000/- ದ ಚೆಕ್ಕನ್ನು ಬೆಳ್ತಂಗಡಿ ಸ್ಪಂದನಾ ಸೇವಾ ಸಂಘದ ವತಿಯಿಂದ ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಸುರೇಶ್ ಕೌಡಂಗೆ, ಹಾಗೂ ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಉಜಿರೆ ಗ್ರಾಮ ಸಮಿತಿ ಅಧ್ಯಕ್ಷ ಧರ್ಣಪ್ಪಗೌಡ ಕಿರಿಯಾಡಿ ಇವರ ಮೂಲಕ ಫಲಾನುಭವಿಯ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಗೋಪಾಲಕೃಷ್ಣ ಜಿ.ಕೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ ಗೌಡ ಕೊಯ್ಯೂರು ಮತ್ತು ಸೀತಾರಾಮ್ ಬೆಳಾಲು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಉಜಿರೆ ಗ್ರಾಮ ಸಮಿತಿ ಅಧ್ಯಕ್ಷರಾದ ಧರ್ಣಪ್ಪಗೌಡ ಕಿರಿಯಾಡಿ ಉಜಿರೆ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನಂಜಯ್ ಪೆರ್ಲ-ಶಿಬಾಜೆ, ಸೊಸೈಟಿ ಸಿಬ್ಬಂದಿಗಳಾದ ನಿತೇಶ್ ಬೆಳ್ತಂಗಡಿ ಮತ್ತು ಚರಣ್ ಬೈಪಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here