Site icon Suddi Belthangady

ಮುಂಬರುವ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ದ.ಜಿಲ್ಲೆಯ 11 ಮಂದಿ ಗಡಿಪಾರು

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 6 ತಿಂಗಳ ಅವಧಿಗೆ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ, ಜಿಲ್ಲಾಧಿಕಾರಿಗಳು ವಿಚಾರಣೆ ಕೈಗೊಂಡು ಅಪರಾಧ ಪ್ರವೃತ್ತಿವುಳ್ಳ, ಸಮಾಜದ ಸ್ವಾಸ್ಥ್ಯಕ್ಕೆ ಗಂಡಾಂತರಕಾರಿಯಾಗಿರುವ ಆರೋಪದಲ್ಲಿ  11 ಮಂದಿಯನ್ನು ಗಡಿಪಾರು ಮಾಡಿ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇವರಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕಿರಣ್ ಕುಮಾರ್ ಡಿ. ಯಾನೆ ಕಿರಣ್ ಶಿಶಿಲ ಹಾಗೂ ತಸ್ಲೀಂ ತಣ್ಣೀರುಪಂತ ಇವರನ್ನು ಮಾ.6 ರಿಂದ ಸೆ.6 ರ ತನಕ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

Exit mobile version