Site icon Suddi Belthangady

ಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಹು ಮತದಿಂದ ಮತ್ತೆ ಬಿಜೆಪಿ ಅಧಿಕಾರಕ್ಕೆ ಕೆ. ಎಸ್. -ಈಶ್ವರಪ್ಪ


ಧರ್ಮಸ್ಥಳ : ಮುಂದೆ ಬರುವ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಉಪ ಮುಖ್ಯ ಮಂತ್ರಿ ಕೆ. ಎಸ್. ಈಶ್ವರಪ್ಪ ಹೇಳಿದರು,

ಅವರು ಮಾ.12 ರಂದು ಧರ್ಮಸ್ಥಳ ಸನ್ನಿಧಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಭಾರತೀಯ ಜನತಾ ಪಕ್ಷ ಹಮ್ಮಿಕೊಂಡ ವಿಜಯ ಸಂಕಲ್ಪ ಯಾತ್ರೆಯ ಮೂಲಕ ಸಂಚಾರ ಮಾಡಿ ಮತದಾರರ ಮನ ಮುಟ್ಟಿದೆ. ಕೇಂದ್ರ ಹಾಗು ರಾಜ್ಯ ಸರಕಾರ ಈ ಬಾರಿಮಾಡಿದ ಅಭಿವೃದ್ಧಿ, ಜನಸೇವೆ ಮುಂದಿನ ಚುನಾವಣೆ ಗೆಲ್ಲಲು ಸಹಕಾರಿಯಾಗಲಿದೆ ಬೆಳ್ತಂಗಡಿ ತಾಲೂಕಿನಲ್ಲಿ ಈಗಿನ ಶಾಸಕರು ಹೆಚ್ಚಿನ ಅನುದಾನ ತಂದು ಕ್ಷೇತ್ರ ಅಭಿವೃದ್ಧಿಯಾಗಿದೆ.
ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಪಕ್ಷದ ತೀರ್ಮಾನ ದಂತೆ ಸ್ಪರ್ಧೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಸಂಕಲ್ಪ ಯಾತ್ರೆಯ ರಾಜ್ಯ ಸಹ ಸಂಚಾಲಕ ದತ್ತಾತ್ರೇಯ, ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ,ಉಪಾಧ್ಯಕ್ಷ ಕೊರಗಪ್ಪ ನಾಯ್ಕ,ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಚೆನ್ನಕೇಶವ, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಉಪಸ್ಥಿತರಿದ್ದರು

Exit mobile version