Site icon Suddi Belthangady

ಶ್ರೀ ರಾಮ ಕ್ಷೇತ್ರದಲ್ಲಿ 63 ನೇ ಶ್ರೀ ರಾಮ ನಾಮ ಸಪ್ತಾಹ, ಜಾತ್ರಾ ಮಹೋತ್ಸವ ಸಮಾಲೋಚನಾ ಸಭೆ


ಧರ್ಮಸ್ಥಳ : ನಿತ್ಯಾನಂದನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಭಗವಾನ್ ನಿತ್ಯಾನಂದ ಮಂದಿರದಲ್ಲಿ 63 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗು ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮ ರಥೋತ್ಸವ
ಮಾ.23 ರಿಂದ ಮೊದಲ್ಗೊಂಡು ಮಾ.30 ರ ವರೆಗೆ ಜಗದ್ಗುರು ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ
ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ ನಡೆಯಲಿದೆ. ಇದರ ಅಂಗವಾಗಿ ಭಕ್ತರ ಊರವರ ಸಮಾಲೋಚನಾ ಸಭೆ ಮಾ.12 ರಂದು ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀ ಗಳ ದಿವ್ಯ ಉಪಸ್ಥಿಯಲ್ಲಿ ಕ್ಷೇತ್ರದಲ್ಲಿ ನಡೆಯಿತು.


ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಬೆಳ್ತಂಗಡಿ ತಾಲೂಕು ಸಂಚಾಲಕ ಜಯಂತ ಕೋಟ್ಯಾನ್, ತಾಲೂಕು ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲ ಬೈಲು, ಸಂಚಾಲಕ ಶೈಲೇಶ್ ಕುಮಾರ್, ಭಗೀರಥ ಜಿ., ವಿಶ್ವ ಹಿಂದೂ ಪರಿಷತ್ ತಾಲೂಕು ಮಾಜಿ ಅಧ್ಯಕ್ಷ ತಿಮ್ಮಪ್ಪ ಗೌಡ ಬೆಳಾಲು, ಬೆಳ್ತಂಗಡಿ ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷೆ ಸುಜಾತಾ ಅಣ್ಣಿ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸುನಿಲ್ ಕನ್ಯಾಡಿ, ವಿವಿಧ ಸಂಘಟನೆಗಳ ಪ್ರಮುಖರು, ಶ್ರೀ ರಾಮ ಕ್ಷೇತ್ರ ಸಮಿತಿ ಸದಸ್ಯರು, ಊರವರು, ಭಕ್ತರು ಹಾಜರಿದ್ದು ಸಲಹೆ ಸೂಚನೆ ನೀಡಿದರು.

Exit mobile version