ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಲಕ್ಕಿಡಿಪ್ ಬಿಡುಗಡೆ

0

ಬೈಲಂಗಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮೇ.17 ರಿಂದ 22ರವರೆಗೆ ನಡೆಯಲಿದೆ.
ಬ್ರಹ್ಮಕಲಶೋತ್ಸವ ಸೇವಾ ಚಟುವಟಿಕೆಗಳ ಅಂಗವಾಗಿ ಲಕ್ಕಿಡಿಪ್ ಕೂಪನ್ ಬಿಡುಗಡೆಯು ಮಾ.12 ರಂದು ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾರಾಯಣ ಗೌಡ, ಪ್ರ. ಕಾರ್ಯದರ್ಶಿ ಪಿ.ಹೆಚ್. ಈಶ್ವರ್ ಗೌಡ, ಆರ್ಥಿಕ ಸಮಿತಿ ಅಧ್ಯಕ್ಷ ದಿನೇಶ್ ದೇವಸ್ಯ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಮೋಹನ್ ಗೌಡ, ಸೀತಾರಾಮ, ಪ್ರಮೀಳಾ ಹಾಗೂ ವಿವಿಧ ಉಪಸಮಿತಿಗಳ ಸಂಚಾಲಕರು, ಸಹಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here