ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಭಗೀರಥ ಜಿ ನೇಮಕ

0

ಬೆಳ್ತಂಗಡಿ : ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕ ಭರತ್ ಮುಂಡೋಡಿಯವರ ಶಿಫಾರಸ್ಸಿನ ಮೇರೆಗೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್‌ರವರ ಅನುಮೋದನೆಯೊಂದಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರನ್ನಾಗಿ ಭಗೀರಥ ಜಿ ರವರನ್ನು ನೇಮಕ ಮಾಡಿದ್ದಾರೆ.

ಇವರು ಬೆಳ್ತಂಗಡಿ ನೋಟರಿ ವಕೀಲರಾಗಿ ಬೆಳ್ತಂಗಡಿ ತಾ.ಪಂ. ಮಾಜಿ ಉಪಾಧ್ಯಕ್ಷರಾಗಿ, ಗುರುವಾಯನಕೆರೆ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷರಾಗಿ, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ, ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ, ಕೆಲ ನಿರ್ವಹಿಸುತ್ತ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here