ಉಪನ್ಯಾಸಕ ಶರತ್ ಕುಮಾರ್ ರವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿ ಎಚ್ ಡಿ ಪ್ರಧಾನ

0

ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿ ಇದರ 41ನೇ ಘಟಿಕೋತ್ಸವ ಸಮಾರಂಭದಲ್ಲಿ ಎಂ ಎಸ್ ಡಬ್ಲ್ಯೂ ವಿಭಾಗದ ಶರತ್ ಕುಮಾರ್ ಆರ್ ರವರು ಮಂಡಿಸಿದ “ಕ್ವಾಲಿಟಿ ಆಫ್ ವರ್ಕ್ ಲೈಫ್ ಆಫ್ ಟ್ರಾಫಿಕ್ ಪೊಲೀಸ್ ಇನ್ ಕರ್ನಾಟಕ ಸ್ಟೇಟ್” ಎಂಬ ಮಹಾ ಪ್ರಬಂಧಕ್ಕೆ ಪಿ ಎಚ್ ಡಿ ಪದವಿಯನ್ನು ಪ್ರಧಾನ ಮಾಡಲಾಯಿತು.ಇವರು ಎಂ ಎಸ್ ಡಬ್ಲ್ಯೂ ವಿಭಾಗದ ಪ್ರಾಧ್ಯಾಪಕ ಪ್ರೊಫೆಸರ್ ಪೌಲ್ ಜಿ.ಆಕ್ವೇನ್ಸ್ ಇವರ ಮಾರ್ಗದರ್ಶನದಲ್ಲಿ ಮಹಾ ಪ್ರಬಂಧವನ್ನು ಮಂಡಿಸಿರುತ್ತಾರೆ


ಇವರು 10 ವರ್ಷಗಳಿಂದ ಮಂಗಳೂರು ವಿಶ್ವವಿದ್ಯಾನಿಲಯದ ಎಂ ಎಸ್ ಡಬ್ಲ್ಯೂ ವಿಭಾಗದಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಕುಂಞ ನಾಯ್ಕ್ ಮತ್ತು ರತ್ನ ದಂಪತಿಯ ಸುಪುತ್ರನಾಗಿರುತ್ತಾರೆ. ಇವರು ಹಲವಾರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ತಮ್ಮ ವಿಚಾರ ಮತ್ತು ಲೇಖನಗಳನ್ನು ಮಂಡಿಸಿರುತ್ತಾರೆ ಹಾಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪತ್ರಿಕೆಗಳಲ್ಲಿ ತಮ್ಮ ಲೇಖನವನ್ನು ಪ್ರಕಟಿಸಿರುತ್ತಾರೆ.

LEAVE A REPLY

Please enter your comment!
Please enter your name here