Site icon Suddi Belthangady

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡುರವರಿಗೆ ‘ಜೈಜವಾನ್ ಜೈಕಿಸಾನ್‌ ಕೃಷಿಕ ರತ್ನ’ ಪ್ರಶಸ್ತಿ ಪ್ರದಾನ

ಉಜಿರೆ: ಭಾರತೀಯ ಭೂ ಸೇನೆಯಲ್ಲಿ 18 ವರ್ಷ ಯೋಧರಾಗಿ ದೇಶ ರಕ್ಷಣೆಯ ಸೇವೆ ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡ ಮಾಡುವ ಪ್ರತಿಷ್ಠಿತ ‘ಜೈ ಜವಾನ್ ಜೈ ಕಿಸಾನ್ ಕೃಷಿಕ ರತ್ನ’ ಪ್ರಶಸ್ತಿ ಯನ್ನು ಮಾ.15ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಪ್ರದಾನ ಮಾಡಲಾಯಿತು.


ಭಾರತೀಯ ಭೂಸೇನೆಯಲ್ಲಿ ಜಮ್ಮು ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಗೋಪಾಲಕೃಷ್ಣರವರು ಸೇನಾ ನಿವೃತ್ತಿಯ ನಂತರ ತನ್ನೂರಿಗೆ ಬಂದು ಉಜಿರೆಯಲ್ಲಿ ನೆಲೆಸಿ ರವಿ ಟ್ರೇಡರ್ಸ್ ಎಂಬ ಉದ್ದಿಮೆ ಸ್ಥಾಪಿಸಿ ಹತ್ತಾರು ಯುವಕರಿಗೆ ಜೀವನೋಪಾಯದ ಹಾದಿಯನ್ನು ಸೃಷ್ಟಿಸಿದ್ದಾರೆ.‌ ಜತೆಗೆ ಸೇನೆಗೆ ಸೇರಲು ಬಯಸುವ ಯುವಕರಿಗೆ ಉಚಿತ ಮಾಹಿತಿ ನೀಡುತ್ತಾ ಬರುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ ಕೃಷಿ ಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ .ಇವರ ಈ ಸಾಧನೆಯನ್ನು ಗುರುತಿಸಿ ಸರ್ಕಾರ ಈ ಪ್ರಶಸ್ತಿ ನೀಡಿ ಗೌರವಿಸಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು‌.

Exit mobile version