ಬೆಳ್ತಂಗಡಿಯಲ್ಲಿ ಸುದ್ದಿ ಉದಯ ಪತ್ರಿಕೆ, ಕಚೇರಿ ಉದ್ಘಾಟನೆ

0


ಬೆಳ್ತಂಗಡಿ: ಸುದ್ದಿ ಉದಯ ಪತ್ರಿಕೆಯ ಉದ್ಘಾಟನೆ ಹಾಗೂ ಕಚೇರಿ ಉದ್ಘಾಟನೆ ಬೆಳ್ತಂಗಡಿ ಮುಖ್ಯ ರಸ್ತೆಯ ರಕ್ಷಾ ಆರ್ಕೆಡ್ ನಲ್ಲಿ ಮಾ.22 ರಂದು ನಡೆಯಿತು.

ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ದೀಪ ಬೆಳಗಿಸಿ ಉದ್ಘಾಟಿಸಿದರು. ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಸತೀಶ್ಚಂದ್ರ ಸೂರ್ಯಗುತ್ತು ಕಚೇರಿ ಉದ್ಘಾಟಿಸಿದರು. ಮಾಜಿ ಸಚಿವ ಗಂಗಾಧರ ಗೌಡ ಯೂಟ್ಯೂಬ್‌ ಚಾನೆಲ್‌ಗೆ ಚಾಲನೆ ನೀಡಿದರು. ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕರು ಕೆ. ವಸಂತ್‌ ಬಂಗೇರ ವೆಬ್‌ಸೈಟ್‌ಗೆ ಚಾಲನೆ ನೀಡಿದರು., ಶಾಸಕ ಹರೀಶ್‌ ಪೂಂಜ ಲೋಗೋ ಬಿಡುಗಡೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಗಂಗಾಧರ ಗೌಡ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಉಜಿರೆ ಲಕ್ಷ್ಮೀ ಇಂಡಸ್ಟ್ರಿಸ್ ಮಾಲಕ ಕೆ. ಮೋಹನ್ ಕುಮಾರ್, ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ,ರಕ್ಷಾ ಆರ್ಕೆಡ್ ಮಾಲಕ ರಾಘನೇಶ್, ಬೆಳ್ತಂಗಡಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲ ರೆ. ಫಾ. ಕ್ಲಿಫರ್ಡ್ ಪಿಂಟೋ, ತಾಲೂಕು ಮುಸ್ಲಿಂ ಒಕ್ಕೂಟ ಅಧ್ಯಕ್ಷ ಬಿ. ಎ. ನಝಿರ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ಡಕ್ಕ, ವಾಣಿ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷ ಎಚ್. ಪದ್ಮ ಗೌಡ, ಬೆಳ್ತಂಗಡಿ ಚೇ0ಬರ್ ಆಫ್ ಕಾಮರ್ಸ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ತಾಲೂಕು ಪತ್ರ ಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್, ತಾಲೂಕು ಮೀಡಿಯಾ ಕ್ಲಬ್ ಅಧ್ಯಕ್ಷ ಸತೀಶ್ ಪೆರ್ಲೆ, ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ, ಬೆಳ್ತಂಗಡಿ ಲ್ಯಾಂಪ್ ಸೊಸೈಟಿ ಅಧ್ಯಕ್ಷ ಲಿಂಗಪ್ಪ ನಾಯ್ಕ ಭಾಗವಹಿಸಿದ್ದರು.

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು, ನಾಗರೀಕರು ಹಾಜರಿದ್ದರು. ಸಂತೋಷ ಕೋಟ್ಯಾನ್ ಸ್ವಾಗತಿಸಿದರು, ಬಿ. ಎಸ್. ಕುಲಾಲ್, ತುಕಾರಾಮ ಬಿ., ತಿಮ್ಮಪ್ಪ ಗೌಡ, ಮತ್ತು ಸಿಬ್ಬಂದಿಗಳು ಅತಿಥಿಗಳನ್ನು ಗೌರವಿಸಿದರು. ಚಂದ್ರಹಾಸ ಬಳಂಜ ನಿರೂಪಿಸಿದರು.

LEAVE A REPLY

Please enter your comment!
Please enter your name here