Site icon Suddi Belthangady

ಧರ್ಮಸ್ಥಳಕ್ಕೆ ಬಂದ ಯುವತಿ ನಾಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ : ಕುಟುಂಬಸ್ಥರ ಜೊತೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ, ದೇವರ ದರ್ಶನ ಬಳಿಕ ಎಲ್ಲರೂ ರೂಂ ಹೋಗಿದ್ದ ನಂತರ ರಾತ್ರಿ ಏಕಾಏಕಿ ಯುವತಿ ನಾಪತ್ತೆಯಾದ ಘಟನೆ ಮಾ.22 ರಂದು ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ್ ,ದೇವಸ್ಥಾನ ಕೇರಿಯ ಹರಿಹರ ಕೃಪಾ ನಿವಾಸಿ ರೇಷ್ಮಾ.ಆರ್.ನಾಯ್ (23ವ.) ಎಂಬಾಕ್ಕೆ ನಾಪತ್ತೆಯಾದ ಯುವತಿ.

ಮಾ.20 ರಂದು ಕುಮಟಾದಿಂದ ರೈಲಿನ ಮೂಲಕ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತ ಬಂದಿದ್ದು, ಮಾ.21 ರಂದು ದೇವರ ದರ್ಶನ ಬಳಿಕ ಧರ್ಮಸ್ಥಳಕ್ಕೆ ಬಸ್ ಮೂಲಕ ಬಂದು ದೇವರ ದರ್ಶನ ಪಡೆದ ಬಳಿಕ ರಾತ್ರಿ 8:45 ಕ್ಕೆ ವಸತಿ ಗೃಹದಲ್ಲಿ ರೂಂ ಮಾಡಿದ್ದರು. ಈ ವೇಳೆ ಯುವತಿ ರೂಂ ನ ಹೊರಾಂಡದಲ್ಲಿ ಸುತ್ತಾಡುತ್ತಿದ್ದಳು ಬಳಿಕ ಏಕಾಏಕಿ ರೇಷ್ಮಾ (23) ನಾಪತ್ತೆಯಾಗಿದ್ದಾಳೆ. ರಾತ್ರಿ ಕುಟುಂಬದವರು ರೂಂ ನಲ್ಲಿ ಉಳಿದು ಮಾ.22 ರಂದು ರೇಷ್ಮಾ ಮನೆಯವರಿಗೆ ಕರೆ ಮಾಡಿ ವಿಚಾರ ತಿಳಿಸಿದಾಗ ಮನೆಗೂ ಬಂದಿಲ್ಲ ಎಂದು ತಿಳಿಸಿದ ಬಳಿಕ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುವತಿಯ ಅಜ್ಜಿ ಸುಮಿತ್ರಾ ಎಂಬವರು ದೂರು ನೀಡಿದ್ದಾರೆ.

Exit mobile version