ಮಾ.26: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 20 ನೇ ಶಾಖೆ ಕಕ್ಕೆಪದವಿನಲ್ಲಿ ಉದ್ಘಾಟನೆ

0

ಬೆಳ್ತಂಗಡಿ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ, ಸುಳ್ಯ ಇದರ ನೂತನ 20 ನೇ ಕಕ್ಕೆಪದವು ಶಾಖೆಯ ಉದ್ಘಾಟನೆಯು ಮಾ.26 ರಂದು ವಿದ್ವಾನ್ ರಾಜ್ ಕಾಂಪ್ಲೆಕ್ಸ್‌ ಕಕ್ಕೆಪದವಿನಲ್ಲಿ ನಡೆಯಲಿದೆ.

ನೂತನ 20 ನೇ ಕಕ್ಕೆಪದವು ಶಾಖೆಯ ಉದ್ಘಾಟನೆಯನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಯವರು ನೆರವೇರಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ. ಸಿ ಜಯರಾಮರವರು ವಹಿಸಲಿದ್ದಾರೆ. ಗಣಕೀಕರಣದ ಉದ್ಘಾಟನೆಯನ್ನು ರಮೇಶ್ ಹೆಚ್‌ ಎಸ್. ಸಹಕಾರ ಸಂಘಗಳ ಉಪನಿಬಂಧಕರು, ದ.ಕ ಜಿಲ್ಲೆ ಇವರು ನೆರವೇರಿಸಲಿದ್ದು, ಭದ್ರತಾ ಕೊಠಡಿಯನ್ನು ಮಾಜಿ ಸಚಿವ ಬಿ ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಪ್ರಥಮ ಠೇವಣಿ ಪತ್ರವನ್ನು ನವಚೇತನಾ ತೋಟಗಾರಿಕಾ ಕಂಪೆನಿ ಕಲ್ಲೇರಿ ಇದರ ಸ್ಥಾಪಕ ಅಧ್ಯಕ್ಷ ದುಗ್ಗಪ್ಪ ಗೌಡ ಪೊಸಂದೋಡಿ ವಿತರಿಸಲಿದ್ದು, ಪ್ರಥಮ ಪಾಲುಪತ್ರ ವಿತರಣೆಯನ್ನು ಉಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್‌ ಮೈರ ನೆರವೇರಿಸಲಿದ್ದಾರೆ. ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಧರ್ಮ ಬೈದರ್ಕಳ ಗರಡಿ ಕ್ಷೇತ್ರ ಕಕ್ಕೆಪದವು ಇದರ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಳಿ ಗ್ರಾಮ ಪಂಚಾಯತ್‌ ಸದಸ್ಯ ಎ. ಸಂಜೀವ ಗೌಡ ಹಾಗೂ ವಿದ್ವಾನ್‌ರಾಜ್ ಕಾಂಪ್ಲೆಕ್ಸ್‌ನ ಮಾಲಕ ರಾಜೇಂದ್ರ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here