ಕೊಯ್ಯೂರು ಪಾಂಬೇಲು ಕಾಂಕ್ರೀಟ್ ರಸ್ತೆ ಹಾಗೂ ಆದರ್ಶನಗರ ರಸ್ತೆಗೆ ಶಿಲಾನ್ಯಾಸ

0

ಕೊಯ್ಯೂರು : ಕೊಯ್ಯೂರು ಗ್ರಾಮ ಪಂಚಾಯತು ವ್ಯಾಪ್ತಿಯ ಪಾಂಬೇಲು ಕಾಂಕ್ರೀಟ್ ರಸ್ತೆಯನ್ನಾಗಿಸುವ ಸಲುವಾಗಿ ರೂ .8 ಲಕ್ಷ ವೆಚ್ಚದಲ್ಲಿ ಅನುದಾನ ಹಾಗೂ ಆದರ್ಶ ನಗರ ಜನತಾ ಕಾಲೋನಿ ಕಾಂಕ್ರೀಟ್ ರಸ್ತೆಗೆ 5 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿ ಇದರ ಶಿಲಾನ್ಯಾಸವನ್ನು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ನೆರವೇರಿಸಿದರು.

ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಾ ಎಸ್.ಸಿ. ಘಟಕದ ಅನುದಾನ ನಿಧಿಯಿಂದ ಬೆಳ್ತಂಗಡಿ ತಾಲೂಕಿನ ಕೆಲವೊಂದು ಗ್ರಾಮಗಳನ್ನು ಆಯ್ಕೆ ಮಾಡಿ ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದೇನೆ. ಮುಂದಿನ ದಿನಗಳಲ್ಲಿ ಈ ಭಾಗದ ಜನರಿಗೆ ಹೆಚ್ಚಿನ ಅನುದಾನ ನೀಡುವುದಾಗಿ ಹೇಳಿ ಕಾಂಕ್ರೀಟ್ ರಸ್ತೆಯು ಚೆನ್ನಾಗಿ ದೀರ್ಘಕಾಲ ಉಪಯೋಗಕ್ಕೆ ಬರಲೆಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಶೈಲೇಶ್ ಕುಮಾರ್, ಕೊಯ್ಯೂರು ಗ್ರಾಮ ಪಂಚಾಯತು ಸದಸ್ಯರು, ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕು ಅಧ್ಯಕ್ಷರು, ನಿರ್ದೇಶಕರು, ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಊರವರು ಉಪಸ್ಥಿತರಿದ್ದರು.

ಲೋಕೇಶ್ ಗೌಡ ಸ್ವಾಗತಿಸಿ, ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here