Site icon Suddi Belthangady

ಕುಚ್ಚೂರು ಬೈಲು ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ ಹಾಗೂ ಪರಿವಾರ ದೈವ ದೇವರುಗಳ ಸ್ಥಾನಕ್ಕೆ ಪಾದುಕಾನ್ಯಾಸ

ಕಡಿರುದ್ಯಾವರ ಗ್ರಾಮದಲ್ಲಿ ನಡೆದ ಕುಚ್ಚೂರು ಬೈಲು ಶ್ರೀ ವನದುರ್ಗಾದೇವಿ ಸನ್ನಿಧಾನದಲ್ಲಿ ಮಾ.23 ರಂದು ವೇದಮೂರ್ತಿ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ನಾಗ ಪ್ರತಿಷ್ಠೆ, ವನದುರ್ಗಾದೇವಿ ದೇವಸ್ಥಾನ ಹಾಗೂ ಪರಿವಾರ ದೈವ ದೇವರುಗಳ ಸ್ಥಾನಕ್ಕೆ ಪಾದುಕಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ರವರು ಭೇಟಿ ನೀಡಿ ಶುಭ ಕೋರಿ ಈ ದೇವಸ್ಥಾನಕ್ಕೆ ತನ್ನಿಂದಾದ ನೆರವು ನೀಡುವುದಾಗಿ ಆಶ್ವಾಸನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಅಶೋಕ್ ಕುಮಾರ್, ಶ್ರೀ ಕ್ಷೇತ್ರ ಧ. ಗ್ರಾ. ಯೋಜನಾಧಿಕಾರಿ ಸುರೇಂದ್ರ, ಶ್ರೀ .ಧ. ಮಂ.ಕಾಲೇಜಿನ ಸಂಸ್ಕ್ರತ ಉಪನ್ಯಾಸಕ ಶ್ರೀಧರ ಭಟ್, ಶ್ರೀ ವನದುರ್ಗಾ ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಹಾಗೂ ಊರವರು ಉಪಸ್ಥಿತರಿದ್ದರು.

Exit mobile version