ಮದ್ದಡ್ಕ: ರಾಮನವಮಿ ಪ್ರಯುಕ್ತ ವಿಶೇಷ ಪೂಜೆ, ಭಜನಾ ಕಾರ್ಯಕ್ರಮ

0

ಕುವೆಟ್ಟು: ಶ್ರೀ ರಾಮ ಸೇವಾ‌ ಸಮಿತಿ ಮದ್ದಡ್ಕ ವಿಶ್ವ‌ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಘಟಕದ ಆಶ್ರಯದಲ್ಲಿ ರಾಮ ನವಮಿ ಪ್ರಯುಕ್ತ ಭಜನಾ ಮಂದಿರದಲ್ಲಿ ಸೂರ್ಯೋದಯದಿಂದ -ಸೂರ್ಯಾಸ್ತಮಾನದವರೆಗೆ ನಡೆಯುವ ಭಜನಾ ಕಾರ್ಯಕ್ರಮವನ್ನು ಓಡೀಲು ಶ್ರೀ ಮಹಾಲಿಂಗೇಶ್ವ‌ರ ದೇವಸ್ಥಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ದೀಪ ಬೆಳಗಿಸಿ, ಉದ್ಘಾಟಿಸಿದರು. ವಿಶೇಷವಾಗಿ ಗಣಹೋಮ ಜರಗಿತು.

ಈ‌ ಸಂದರ್ಭದಲ್ಲಿ ಶ್ರೀರಾಮ ಸೇವಾ‌ ಸಮಿತಿಯ ಗೌರವಾಧ್ಯಕ್ಷ ಶೇಖರ್ ಶೆಟ್ಟಿ ಉಪ್ಪಡ್ಕ, ಅಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಕಾರ್ಯದರ್ಶಿ ಮನೋಹರ ಕೇದಳಿಕೆ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ, ಕಾರ್ಯದರ್ಶಿ ವಿನೋದ್ ಶೆಣೈ, ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ‌ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ,. ಲಕ್ಷ್ಮೀಕಾಂತ್ ಮೂಡೈಲು, ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here