ಶ್ರೀ ಸದಾಶಿವರುದ್ರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ವರ್ಷಾವಧಿ ಜಾತ್ರೆ ಪ್ರಾರಂಭ

0

ನಡ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಮಾ.30 ರಿಂದ ಎ.4 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರೆ ನಡೆಯಲಿದೆ.

ಮಾ.30 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ದೇವರ ಸನ್ನಿಧಿಯಲ್ಲಿ ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ರಾತ್ರಿ ರಂಗಪೂಜೆ, ಉತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ಸುಭಾಶ್ಚಂದ್ರ ಸೂರ್ಯ ಗುತ್ತು, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ, ರಾಜಶೇಖರ್ ಅಜ್ರಿ, ಮುನಿರಾಜ ಅಜ್ರಿ, ಶ್ರೀಧರ್ ರಾವ್ ಮೊದಲಾದವರು ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here