Site icon Suddi Belthangady

ಬೆಳ್ತಂಗಡಿ: ಬೈಕ್ ಗಳ ನಡುವೆ ಭೀಕರ ಅಪಘಾತ; ಹಾ.ಉ. ಸ. ಸಂಘದ ನಿವೃತ್ತ ಕಾರ್ಯದರ್ಶಿ ಸಾವು

ಬೆಳ್ತಂಗಡಿ:  ಸವಣಾಲು ಮಸೀದಿ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಬೈಕ್ ಸವಾರ ಕರುಣಾಕರ ಪ್ರಾಣಾಪಾಯ ದಿಂದ ಪಾರಾದ ಘಟನೆ ಮಾ.30 ರಂದು ನಡೆದಿದೆ.

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ನಿವೃತ್ತ ಕಾರ್ಯದರ್ಶಿ ಹೆನ್ರಿ ಡಿಸೋಜಾ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಹೆಣ್ಣು ಮಗಳು ಹಾಗು ಬಂಧು ವರ್ಗದವರನ್ನು ಅಗಲಿದ್ದಾರೆ.

Exit mobile version