ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪೂರ್ವಭಾವಿ ಸಭೆ

0

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪೂರ್ವಭಾವಿ ಸಭೆ ಮಾ.30 ರಂದು ಶ್ರೀ ಗುರುನಾರಾಯಣ ಸಭಾಂಗಣದಲ್ಲಿ ನಡೆಯಿತು.

ಅಭ್ಯರ್ಥಿ ರಕ್ಷಿತ್ ಶಿವರಾಂ ಅಧ್ಯಕ್ಷತೆ ವಹಿಸಿ ಚುನಾವಣೆ ಎದುರಿಸುವ ಬಗ್ಗೆ ವಿಚಾರ ವಿನಿಮಯ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರುಗಳಾದ ರಂಜನ್ ಗೌಡ, ಶೈಲೇಶ್ ಕುಮಾರ್ ಕುರ್ತೋಡಿ, ಎಐಸಿಸಿ ವಕ್ತಾರೆ ಶ್ರೀಮತಿ ಲಾವಣ್ಯ ಬಲ್ಲಾಳ್ , ಜಿ. ಪಂ. ಮಾಜಿ ಸದಸ್ಯರುಗಳಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೇಡಿ ,ಶ್ರೀಮತಿ ನಮಿತಾ ಪೂಜಾರಿ ,ಕೆಪಿಸಿಸಿ ಸದಸ್ಯ ಕೇಶವ ಗೌಡ, ಕೆಪಿಸಿಸಿ ಉಸ್ತುವಾರಿ ಭಗೀರಥ, ಅಭಿನಂದನ್ ಹರೀಶ್, ಮನೋಹರ್ ವಕೀಲರು, ಅಬ್ದುಲ್ ರಹಿಮಾನ್ ಪಡ್ಪು ಮತ್ತು ಹಿರಿಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here