Site icon Suddi Belthangady

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನಲೆ; ಅಧಿಕಾರಿಗಳ ಸಭೆ


ಬೆಳ್ತಂಗಡಿ: ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ತಾಲೂಕಿನ ಅಧಿಕಾರಿಗಳ ಸಭೆ ಎ.1 ರಂದು ಬೆಳ್ತಂಗಡಿ ಶ್ರೀ ಧ. ಮ. ಕಲಾ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಚುನಾವಣಾಧಿಕಾರಿ ಯೋಗೀಶ್ ಎಚ್. ಆರ್, ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ್ ಟಿ. ಸುರೇಶ್ ಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ. ಕುಸುಮಾಧರ್, ಅಂಚೆ ಮತದಾನದ ನೋಡೇಲ್ ಕೆ. ರಾಜಶೇಖರ್ ಶೆಟ್ಟಿ, ಸೆಕ್ಟರ್ ಅಧಿಕಾರಿ ಧರಣೇ0ದ್ರ ಕೆ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ಶಿಕ್ಷಣ ಸಂಯೋಜಕ ಸಿದ್ದಲಿಂಗ ಉಪಸ್ಥಿತರಿದ್ದು ಚುನಾವಣೆಯ ವಿವರ ಹಾಗೂ ಅಂಚೆ ಮತದಾನ ಕುರಿತು ಮಾಹಿತಿ ನೀಡಿದರು.

ಈ ಬಾರಿ 80 ವರ್ಷ ಮೇಲ್ಪಟ್ಟ ಮತ್ತು ವಿಕಲ ಚೇತನ ಮತದಾರರಿಗೆ ಅಂಚೆ ಮತ ನೀಡುವ ಬಗ್ಗೆ ಮಾಹಿತಿಯನ್ನು ಅಧಿಕಾರಿಗಳು ನೀಡಿದರು.

ಸಭೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ 241 ಮತಕಟ್ಟೆಯ ಬಿ ಎಲ್ ಓ ಗಳು, ಅಧಿಕಾರಿಗಳು ಹಾಜರಿದ್ದರು.

Exit mobile version