ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ

0

ಬೆಳ್ತಂಗಡಿ: ಮೇ 10 ರಂದು ನಡೆಯಲಿರುವ ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಯ ಅಂಗವಾಗಿ ಬೆಳ್ತಂಗಡಿಯ ಭಾರತೀಯ ಜನತಾ ಪಕ್ಷದ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹಳೇಕೋಟೆ ಬಳಿ ಎ.6 ರಂದು ಬಿಜೆಪಿಯ ಹಿರಿಯ ಮುಖಂಡ ವಕೀಲ ನೇಮಿರಾಜ್ ಶೆಟ್ಟಿ ಉದ್ಘಾಟಿಸಿ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್,ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್, ಮಾಜಿ ಅಧ್ಯಕ್ಷರುಗಳಾದ ಕುಶಾಲಪ್ಪ ಗೌಡ ಪೂವಾಜೆ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ ಸವಣಾಲು, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಉಪಾಧ್ಯಕ್ಷ ಸೀತಾರಾಮ ಬಿ. ಎಸ್.,ಪ್ರಶಾಂತ್ ಪಾರೆಂಕಿ, ರಾಜೇಶ್ ಪೂಜಾರಿ ಮುಡುಕೋಡಿ,ಶಾಸಕ ತಂದೆ ಮುತ್ತಣ್ಣ ಪೂಂಜ, ಬೆಳ್ತಂಗಡಿ ಎಲ್. ಡಿ. ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಲೆ, ಸೇರಿದಂತೆ ಬಿಜೆಪಿಯ ಪ್ರಮುಖರು, ಪಂಚಾಯತ್ ಸದಸ್ಯರು,ಶಕ್ತಿ ಕೇಂದ್ರದ ಅಧ್ಯಕ್ಷರು ಬೂತ್ ಸಮಿತಿಯ ಅಧ್ಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್ ಧರ್ಮಸ್ಥಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here