ಪಟ್ರಮೆ: ತೀವ್ರ ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಿಸದೆ ಇಬ್ಬರು ಗೆಳತಿಯರು ಸಾವು

0

ಪಟ್ರಮೆ :ಸ್ನೇಹಿತೆಯರಿಬ್ಬರು ತೀವ್ರವಾದ ಹೊಟ್ಟೆ ನೋವಿನಿಂದ ಬಳಲಿ ಪ್ರತ್ಯೇಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಎ.6 ರಂದು ನಡೆದಿದೆ.ಮೃತಪಟ್ಟ ಯುವತಿಯರನ್ನು ಪಟ್ರಮೆ ಗ್ರಾಮದ ಪಟ್ಟೂರಿನ ಬಾಬು ಹಾಗೂ ಗೀತ ದಂಪತಿಗಳ ಪುತ್ರಿ ರಕ್ಷಿತಾ (೨೨) ಮತ್ತು ಆಕೆಯ ನೆರೆಮನೆಯ ಶ್ರೀನಿವಾಸ ಆಚಾರಿ ಹಾಗೂ ಪಾರ್ವತಿ ದಂಪತಿಗಳ ಪುತ್ರಿ ಲಾವಣ್ಯ (೨೦) ಎಂದು ಗುರುತಿಸಲಾಗಿದೆ.
ಇವರಿಬ್ಬರೂ ಕೂಡ ಕಳೆದೊಂದು ವರ್ಷದಿಂದ ಅನಾರು ಹಾಗೂ ಮುಂಡೂರುಪಳಿಕೆ-ಉಪ್ಪಾರಪಳಿಕೆ ವಲಯದ ಸೇವಾ ನಿರತೆಯರಾಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಉತ್ತಮ ಸ್ನೇಹಿತೆಯಾಗಿದ್ದರು.ಎ.2ರಂದು ರಕ್ಷಿತ ಹಾಗೂ ಲಾವಣ್ಯರವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಿಸದೆ ಏ 6ರಂದು ಬೆಳಗ್ಗೆ ರಕ್ಷಿತಾ ಹಾಗೂ ಸಂಜೆ ಲಾವಣ್ಯ ಮೃತಪಟ್ಟಿದ್ದಾರೆ.ಇಬ್ಬರ ಹೊಟ್ಟೆ ನೋವಿಗೂ ನಿಖರ ಕಾರಣ ತಿಳಿದು ಬಂದಿಲ್ಲ. ವೈದ್ಯಕೀಯ ಪರೀಕ್ಷೆಯ ವರದಿ ನಂತರವೇ ತಿಳಿದು ಬರಬೇಕಿದೆ.ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಯುವತಿಯರ ಸಾವಿನ ಬಗ್ಗೆ ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.
ಒಂದೇ ದಿನ ಯುವತಿಯರಿಬ್ಬರು ಒಂದೇ ಕಾರಣಕ್ಕೆ ಸಾವಿನಪ್ಪಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here