Site icon Suddi Belthangady

ಬೆಂಗಳೂರಿನಲ್ಲಿ ಕರಗ ವೀಕ್ಷಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ-ಸಹೋದರ ಸುರೇಂದ್ರ ಕುಮಾರ್ ಸಾಥ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಐತಿಹಾಸಿಕ ಕರಗ ಶಕ್ತ್ಯೋತ್ಸವ ಅದ್ದೂರಿಯಾಗಿ ನೆರವೇರಿ, ಚೈತ್ರ ಪೌರ್ಣಿಮೆಯ ಬೆಳದಿಂಗಳಿನಲ್ಲಿ ಮಲ್ಲಿಗೆಯ ಕಂಪಿನೊಂದಿಗೆ ಕರಗ ಶಕ್ತ್ಯೋತ್ಸವ ಆರಂಭವಾಗಿ, ನಗರದ ಅನೇಕ ಕಡೆ ಕರಗ ಮೆರವಣಿಗೆ ಸಾಗಿತು.


ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗಡೆಯವರು ಧಾರ್ಮಿಕ ವಿಧಿ-ವಿಧಾನಗಳಲ್ಲಿ ಭಾಗವಹಿಸಿ, ಕರಗದ ವೈಭವವನ್ನು ಕೂಡ ನೋಡಿದರು. ಈ ವೇಳೆ ಅವರ ಸಹೋದರ ಸುರೇಂದ್ರ ಕುಮಾರ್ ರವರು ಹೆಗ್ಗಡೆಯವರಿಗೆ ಸಾಥ್ ನೀಡಿದರು.

ಆ ನಂತರ ಆರಂಭವಾದ ಕರಗ ಮೆರವಣಿಗೆ, ನಗರದ ಕೆಲ ಭಾಗಗಳ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ನಗರದ ಅನೇಕ ಕಡೆ ಸಾಗುವ ಮೂಲಕ ಲಕ್ಷಾಂತರ ಜನರಿಗೆ ದರ್ಶನ ನೀಡಿದೆ.

Exit mobile version