Site icon Suddi Belthangady

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ

ಶಿಶಿಲ :ಅದೊಂದು ಅಪರೂಪದ ‌ಕಾರ್ಯಕ್ರಮ.ಪ್ರತೀವರ್ಷ ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿಯಂದು ಭಜನೆ, ಅನ್ನದಾನ, ರಾಮಾಯಣ ಗ್ರಂಥಪೂಜೆ, ರಾಮಾಯಣ ಕಥೆ ನಿರಂತರ ನಡೆದುಕೊಂಡು ಬರುತ್ತಿದೆ.
ಧಾರ್ಮಿಕ ಕಾರ್ಯ, ಧರ್ಮ ಜಾಗ್ರತಿ ಮೂಡಿಸುತ್ತಿರುವ ಈ ಮನೆಯ ಸೇವಾ ಕಾರ್ಯಕ್ಕೆ‌ ಅಭಿನಂದನೆ ಎಂದು ಬೆಂಗಳೂರು, ದಾವಣಗೆರೆ ವಿಪ್ರ ಸಾಮ್ರಾಜ್ಯದ ನಿರ್ದೆಶಕ ವೆ.ಮೂ ರಾಘವೇಂದ್ರ ಆಚಾರ್ಯ ನುಡಿದರು.
ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ‌ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಧಾರ್ಮಿಕ ಸೇವಾ ಕಾರ್ಯ ಗುರುತಿಸಿ ಹನುಮ ಜಯಂತಿಯಂದು ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ತಮ್ಮ ಸಂಸ್ಥೆ ವತಿಯಿಂದ ” ಭಜನಾ ಭಾಸ್ಕರ” ಎಂಬ ಪ್ರಶಸ್ತಿ ಪ್ರಸ್ತಾಪವನ್ನು ಮಂಡಿಸಿದರು.
ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ.ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಮಕೃಷ್ಣ ‌ಕಾಟುಕುಕ್ಕೆ, ಸುಂದರ ಬಿಳಿನೆಲೆ, ರಾಘವೇಂದ್ರ ಕಿಗ್ಗ, ಶ್ರೀನಿವಾಸ‌ ಮೂಡೆತ್ತಾಯ ಮುಂತಾದ ಗಣ್ಯರು ಉಪಸ್ಥಿತರಿದ್ದರು. ‌
ಇದೆ ಸಂಧರ್ಭದಲ್ಲಿ ಶ್ರೀ ಜಯರಾಮ ನೆಲ್ಲಿತ್ತಾಯ ದಂಪತಿಗಳನ್ನು ವಿಪ್ರ ಸಮೂಹ ಸಂಸ್ಥೆ ಬೆಂಗಳೂರು ವತಿಯಿಂದ ಅಭಿನಂದಿಸಲಾಯಿತು.

Exit mobile version