ತಾಲೂಕಿನ ಕೆಲವೆಡೆ ಮಳೆಯಿಂದಾಗಿ ಹಾನಿ:ಶಾಸಕ ಹರೀಶ್ ಪೂಂಜ ಪರಿಶೀಲನೆ

0

ಬೆಳ್ತಂಗಡಿ: ತಾಲೂಕಿನ ಕೆಲವೆಡೆ ಶುಕ್ರವಾರ ಸಂಜೆ ಸುರಿದ ಗುಡುಗು,ಗಾಳಿ ಸಹಿತ ಮಳೆಯಿಂದಾಗಿ ಕೆಲ ಮನೆಗಳಿಗೆ ಹಾನಿಯಾಗಿದೆ. ಈ ಸಂಬಂಧ ಶಾಸಕ ಹರೀಶ್ ಪೂಂಜ ರಾತ್ರಿ ವೇಳೆ ಹಾನಿಗೊಳಗಾದ ಮನೆಗಳ ವೀಕ್ಷಣೆ ಮಾಡಿ,ಮನೆಯವರೊಂದಿಗೆ ಮಾತನಾಡಿದರು.


ನಡ ಹಾಗೂ ಉಜಿರೆ ಗ್ರಾಮಗಳಲ್ಲಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.


ಈ ವೇಳೆ, ಬಿಜೆಪಿ ಮಂಡಲ ಕಾರ್ಯದರ್ಶಿ,ನಾವೂರು ಗ್ರಾ.ಪಂ.ಅಧ್ಯಕ್ಷ ಗಣೇಶ್ ಗೌಡ ನಾವೂರು,ನಡ ಪಂಚಾಯತ್ ಅಧ್ಯಕ್ಷ ವಿಜಯ್, ಉಜಿರೆಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here