Site icon Suddi Belthangady

ಚಾರ್ಮಾಡಿ ಘಾಟಿ 2 ನೇ ತಿರುವುವಿನಲ್ಲಿ ಕಾರು ಕಂದಕಕ್ಕೆ, ಸರೋಜಿನಿ ಶೆಟ್ಟಿ ನಿಧನ, ಉಜಿರೆ ಗ್ರಾ.ಪಂ ಅಧ್ಯಕ್ಷೆಗೆ ಗಾಯ

ಚಾರ್ಮಾಡಿ :ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ, ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದ ಘಟನೆ ಎ.9 ರಂದು ರಾತ್ರಿ ನಡೆದಿದೆ.

ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾದ ಸಂಬಂಧಿಕರ ಮನೆಗೆ ಭೇಟಿ ನೀಡಿ ಹಿಂದಿರುಗುವ ವೇಳೆ ರಾತ್ರಿ 9 ಗಂಟೆಯ ವೇಳೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಸರೋಜಿನಿ ಶೆಟ್ಟಿ (64ವ) ತಡ ರಾತ್ರಿ 2 ಗಂಟೆಯ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾರಿನಲ್ಲಿದ್ದ ಪುಷ್ಪಾವತಿ ಆರ್.ಶೆಟ್ಟಿ ಸಹಿತ ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್ ,ಮೊಮ್ಮಗಳು ಸಾಕ್ಷಿ, ಚಾಲಕ ಅರುಣ್ ಹಾಗೂ ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಇವರಲ್ಲಿ ಪೂರ್ಣಿಮಾ ಶೆಟ್ಟಿ ಗಂಭೀರವಾಗಿದ್ದಾರೆಂದು ತಿಳಿದು ಬಂದಿದೆ.

Exit mobile version