ಕೆ.ಪಿ.ಸಿ.ಸಿ. ಕಾರ್ಮಿಕ ಘಟಕದಿಂದ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತಾ ಸಭೆ

0

ಇಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಕೆ.ಪುಟ್ಟಸ್ವಾಮಿಗೌಡರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಮಿಕ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತಾನಾಡಿದ ಅಧ್ಯಕ್ಷರು ನಡೆಯಲಿರುವ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷ ಆಯ್ಕೆಗೊಳಿಸಿದ ಅಭ್ಯರ್ಥಿಗಳ ಜೊತೆಯಲ್ಲಿ ನಿಂತು ಕಾಂಗ್ರೆಸ್ ಪಕ್ಷದ ನೂರಾರು ಜನಪರ ಕಾರ್ಯಕ್ರಮಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಬೇಕೆಂದು ಆದೇಶಿಸಿ, ನಂತರ ಪ್ರತೀ ವಿದಾನಸಬಾ ಕ್ಷೇತ್ರದ ಎಲ್ಲಾ ನಾಯಕರುಗಳ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕರಿಸಬೇಕೆಂದು ಸೂಚಿಸಿದರು.

ಈ ಸಂಧರ್ಭದಲ್ಲಿ ಕಾರ್ಮಿಕ ವಿಭಾಗದ ಎಲ್ಲಾ ಜಿಲ್ಲೆಯ ಅಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳು ಹಾಗೂ ಕಾರ್ಮಿಕ ವಿಭಾಗದ ಸಾಮಾಜಿಕ ಜಾಲತಾಣದ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದು ಹಲವು ಜಿಲ್ಲೆಯ ಅಧ್ಯಕ್ಷರುಗಳು ಮಾತಾನಾಡಿ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಹಂಚಿಕೊಂಡರು.ರಾಜ್ಯ ಪ್ರದಾನ ಕಾರ್ಯದರ್ಶಿ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಮಿಕ ಘಟಕದ ಉಸ್ತುವಾರಿಯಾದ ಅಬ್ದುಲ್ ರಹಿಮಾನ್ ಪಡ್ಪುರವರು ದ.ಕ ಜಿಲ್ಲೆಯ ಪ್ರಸಕ್ತ ರಾಜಕೀಯ ಸನ್ನಿವೇಶವನ್ನು ಸವಿವರವಾಗಿ ಸಭೆಗೆ ತಿಳಿಸಿದರು.

ಹಾಗೂ ಹಲವು ವಿಚಾರಗಳ ಬಗ್ಗೆ ಚರ್ಚಿಸಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು ಈ ಸಭೆಗೆ ಹಾಜರಾಗಲು ಹಲವು ಜಿಲ್ಲೆಗಳಿಂದ ಬಂದ ಅಧ್ಯಕ್ಷರುಗಳಿಗೆ ಹಾಗೂ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಲಾಯಿತು.

LEAVE A REPLY

Please enter your comment!
Please enter your name here