ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ನೀಡಿ, ರುದ್ರಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ

0

ಮಚ್ಚಿನ: ಮಚ್ಚಿನ ಗ್ರಾಮದ ನೂತನವಾಗಿ ನಿರ್ಮಾಣವಾಗುತ್ತಿರುವ ರುದ್ರಭೂಮಿಯ ಅಭಿವೃದ್ಧಿಯ ದೃಷ್ಟಿಯಿಂದ ರುದ್ರ ಭೂಮಿ ಸಮಿತಿ ಮಚ್ಚಿನ ಹಾಗೂ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಚ್ಚಿನ ಎಬಿಸಿ ಒಕ್ಕೂಟ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಧರ್ಮಸ್ಥಳಕೆ ತೆರಳಿ ಡಾ/ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ರುದ್ರಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ರುದ್ರಭೂಮಿಯ ಸಮಿತಿಯ ಅಧ್ಯಕ್ಷರು ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಟ್ಟಾಚೆ ಗೌರವಾಧ್ಯಕ್ಷರಾದ ಡಾಕ್ಟರ್ ಕೆ ಎಂ ಶೆಟ್ಟಿ. ಪ್ರಭಾಕರ್ ಪ ಕಾರ್ಯದರ್ಶಿ ರವಿಚಂದ್ರ ಸಮಿತಿಯ ಸದಸ್ಯರು ಹಾಗೂ ಗ್ರಾಮ ಅಭಿವೃದ್ಧಿ ಯೋಜನೆ ಒಕ್ಕೂಟಗಳ ಅಧ್ಯಕ್ಷರಾದ ಧರ್ಮಪ್ಪ ಗೌಡ. ಪದ್ಮಪ್ಪ ಗೌಡ ಜಯ ಪೂಜಾರಿ ಜನಜಾಗೃತಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಗೋಪಾಲ ಪೂಜಾರಿ ಕೊಲಾಜೆ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಹರ್ಷ ಬಳ್ಳಮಂಜ ಮಚ್ಚಿನ ಸೇವಾ ಪ್ರತಿನಿಧಿ ಪರಮೇಶ್ವರ್. ಮಂಜುಳಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here