Site icon Suddi Belthangady

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತೆಂಕಕಾರಂದೂರು: ಸಾಮೂಹಿಕ ಸತ್ಯನಾರಾಯಣ ಪೂಜೆ

ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತೆಂಕಕಾರಂದೂರು ಇಲ್ಲಿ ವಿಷ್ಣು ಮೂರ್ತಿ ಭಜನಾ ಮಂಡಳಿ, ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಪ್ರಗತಿ ಬಂಧು ತಂಡಗಳ A.B ಒಕ್ಕೂಟ ಹಾಗೂ ಸ್ಥಳೀಯ ಸಂಘ, ಸಂಸ್ಥೆ ಸಹಕಾರದಲ್ಲಿ ರಾಮ ದಾಸ್ ಭಟ್ ಮುಂಡೂರು ಇವರ ಪೌರೋಹಿತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಜರಗಿತು.ಶ್ರೀ ಕ್ಷೇತ್ರದ ವಿಷ್ಣು ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.ಸುಮಾರು ಅರುವತ್ತು ಮಂದಿ ವೃತಾಚಾರಿಗಳು ಸೇವೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಊರಿನ ಭಕ್ತಾಧಿಗಳು, ದೇವಸ್ಥಾನದ ಆಡಳಿತ ಮೊಕ್ತೇಸರಾದ ಕೃಷ್ಣ ಸಂಪಿಗೆತ್ತಾಯ, ಪ್ರಧಾನ ಅರ್ಚಕ ಪ್ರಭಾಕರ ಉಪಾಧ್ಯಯ, ವಿಷ್ಣು ಸಂಪಿಗೆತ್ತಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ, ಭಜನಾ ಮಂಡಳಿಯ ಅಧ್ಯಕ್ಷ ಯೋಗೀಶ್ ಸಪಲ್ಯ, ಕಾರ್ಯದರ್ಶಿ ವಿಶ್ವಾಸ್ ಕಳಿಕ್ಕ, ಗೌರವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಗೌರವ ಸಲಹೆಗಾರರು, ಹಾಗೂ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.ನಾಳೆ ಬೆಳಿಗ್ಗೆ ಕ್ಷೇತ್ರದಲ್ಲಿ ಸೌರ ಯುಗಾದಿ ವಿಷು ಆಚರಣೆ ನಡೆಯಲಿದೆ.

Exit mobile version