Site icon Suddi Belthangady

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಶಾಸಕ ಪೂಂಜ

ಧರ್ಮಸ್ಥಳ: ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದ ಪರವಾಗಿ ಎರಡನೇ ಬಾರಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ,ಶಾಸಕ ಹರೀಶ್ ಪೂಂಜ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾನ್ಯ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ಗೌಡ ನಾವೂರು, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾಮ‌ಪಂಚಾಯತ್ ಸದಸ್ಯರಾದ ರವಿಕುಮಾರ್, ಸುಧಾಕರ್ ಗೌಡ, ,ಹರ್ಷಿತ್ ಜೈನ್,ವಸಂತ ನಾಯ್ಕ್ , ರೀನಾ, ಡಯಾಲಿನಿ,ಸುನಿತಾ,ಮುರುಳಿದಾಸ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ನೀಲಕಂಠ ಶೆಟ್ಟಿ, ಉಮಾನಾಥ್,ಪ್ರಭಾಕರ್ ಗೌಡ ಬೊಳ್ಮ, ಸೊಸೈಟಿ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಬಿಜೆಪಿ ಪ್ರಮುಖರಾದ ಡಿ.ಕೃಷ್ಣ,‌ವಿಕ್ರಂ,ನವೀನ್ ಕನ್ಯಾಡಿ,ಗಂಗಾಧರ್ ಬೇಕಲ್,ಮಂಜುನಾಥ್ ಗುಡಿಗಾರ್ ಮುಂತಾದವರು ಹಾಗೂ ವಿವಿಧ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು..

Exit mobile version