Site icon Suddi Belthangady

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಸುವ ಬಹಿರಂಗ ಸಭೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಸುವ ಬಹಿರಂಗ ಸಭೆಯು ಎ.17ರಂದು ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾ ಭವನದಲ್ಲಿ ನಡೆಯಿತು.ಮಾಜಿ ಶಾಸಕ ವಸಂತ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು.

ಸಭಾ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರ ನಿಕೇತ್ ರಾಜ್ ಪ್ರಧಾನ ಭಾಷಣಗೈದರು.ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ, ಮಾಜಿ ಶಾಸಕರಾದ ಕೆ.ವಸಂತ ಬಂಗೇರ, ಚಲನ ಚಿತ್ರ ನಟ ವಿಜಯರಾಘವೇಂದ್ರ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆ.ಪಿ.ಸಿ.ಸಿ ಸಂಯೋಜಕ ಶಾಹಿದ್ ತೇಕ್ಕಿಲ್, ರಾಜಶೇಖರ್ ಅಜರಿ, ಕೇಶವ ಬೆಳಾಲ್, ಶೇಕರ ಕುಕ್ಕೆಡಿ, ದರಣೇಂದ್ರ ಕುಮಾರ್, ಸತೀಶ್ ಕಾಶಿಪಟ್ನ, ಅಬ್ದುಲ್ ರಹಿಮಾನ್ ಪಡ್ಪು, ಲೋಕೇಶ್ವರಿ ವಿನಯಚಂದ್ರ, ಜೆಸಿಂತಾ ಮೋನಿಸ್, ಜೋಕಿಮ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ನಾಯಕರು, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಗೌಡ, ಪ್ರಚಾರ ಸಮಿತಿ ಸಂಯೋಜಕ ಭಗೀರಥ.ಜಿ, ಎ.ಸಿ ಮ್ಯಾಥ್ಯೂ, ಪ್ರಶಾಂತ್ ವೇಗಸ್, ಪ್ರವೀಣ್ ಗೌಡ, ದಿನೇಶ್ ಕೋಟ್ಯಾನ್, ರಘುಚಂದ್ರ, ಜಗದೀಶ್, ರವೀಂದ್ರ ಪೂಜಾರಿ ಬಂದೋಟ್ಟು, ಬೀ ಎಂ ಹಮೀದ್, ಮೋಹನ್ ಶೆಟ್ಟಿಗಾರ್, ತಾಲೂಕಿನ ಜನಪ್ರತಿನಿಧಿಗಳು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ತಾಲೂಕ್ ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಮಟ್ಟದ ಪಕ್ಷದ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version