Site icon Suddi Belthangady

ಬಿಜೆಪಿ ಬೆಳ್ತಂಗಡಿ ವಿಧಾನಸಭಾ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ನಾಮಪತ್ರ ಸಲ್ಲಿಕೆಯ ಭವ್ಯ ಮೆರವಣಿಗೆಗೆ ಚಾಲನೆ

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷ ಬೆಳ್ತಂಗಡಿ ವಿಧಾನಸಭಾ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ನಾಮಪತ್ರ ಎ.೧೭ರಂದು ಸಲ್ಲಿಸಲಿದ್ದು ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಕುತ್ಯಾರು ದೇವಸ್ಥಾನದಲ್ಲಿ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು.


ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಮಂಡಲದ ಪದಾಧಿಕಾರಿಗಳು, ಪಕ್ಷದ ಹಿರಿಯ-ಕಿರಿಯ ನಾಯಕರುಗಳು, ವಿವಿಧ ಗ್ರಾಮ ಪಂಚಾಯತ್‌ನ ಅಧ್ಯಕ್ಷರುಗಳು, ಸದಸ್ಯರುಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಮೆರವಣಿಗೆಯ ಮೂಲಕ ಸಾಗಿ ಬಂದು ಮಿನಿ ವಿಧಾಬ ಸೌಧದ ಚುನಾವಣಾ ಕಚೇರಿಯಲ್ಲಿ ಸಲ್ಲಿಸುವರು.

Exit mobile version