Site icon Suddi Belthangady

ಧರ್ಮಸ್ಥಳ ನೇರ್ತಾನೆಯಲ್ಲಿ ಚಿರತೆ ದಾಳಿ: ಕರುವನ್ನು ಕೊಂದು ಹಾಕಿದ ಚಿರತೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಮನೆಯ ಸಮೀಪವಿದ್ದ ದನದ ಹಟ್ಟಿಗೆ ನುಗ್ಗಿದ ಚಿರತೆ ಕಟ್ಟಿ ಹಾಕಿದ್ದ ದನವೊಂದನ್ನು ಕೊಂದು ತಿಂದ ಘಟನೆ ಎ.18 ಮುಂಜಾನೆ 4 ಗಂಟೆಗೆ ಬೆಳಕಿಗೆ ಬಂದಿದೆ.
ಇಲ್ಲಿನ ಪಂದಮಕ್ಕಲ್ ಮನೆಯ ನಿವಾಸಿಯಾಗಿರುವ ತ್ರೇಸ್ಯಾಮ್ಮ ಪಿ.ಕೆ ಎಂಬವರ ಮನೆಯ ಸಮೀಪದ ಹಟ್ಟಿಯಲ್ಲಿದ್ದ ದನವನ್ನು ರಾತ್ರಿಯ ವೇಳೆ ಹಟ್ಟಿಗೆ ನುಗ್ಗಿದ ಚಿರತೆ ಕೊಂದು ತಿಂದಿದೆ.ನೇರ್ತನೆಯಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಹಾಗೂ ಆನೆಗಳ ಹಾವಳಿ ತುಂಬಾ ಹೆಚ್ಚಾಗಿದೆ. ಕೃಷಿಕರು ಆತಂಕದಲ್ಲಿಯೇ ಬದುಕಬೇಕಾದ ಸ್ಥಿತಿ ಎದುರಾಗಿದೆ.ತ್ರೇಸ್ಯಾಮ್ಮ ಅವರ ಮನೆ ಅರಣ್ಯದ ಸಮೀಪವೇ ಇದೆ ಆಶಾ ಕಾರ್ಯಕರ್ತೆಯಾದ್ದ ಇವರು ಅತಿಸಣ್ಣ ಕೃಷಿಕಾರಗಿದ್ದು ಹೈನುಗಾರಿಯೇ ಇವರಿಗೆ ಜೀವನೋಪಾಯವಾಗಿತ್ತು‌.

ಕಳೆದ ಕೆಲ ದಿನಗಳ ಹಿಂದೆ ಈ ಪರಿಸರದಲ್ಲಿ ಅರಣ್ಯಕ್ಕೆ ಬೆಂಕಿ ಬಿದ್ದಿದ್ದು ಅದರ ಬಳಿಕ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ.ಎಂದು ಇಲ್ಲಿನ ಜನರು ಮಾಹಿತಿ ನೀಡುತ್ತಿದ್ದಾರೆ.ಮುಂಡಾಜೆ ದುಂಬೆಟ್ಟು ಪರಿಸರದಲ್ಲಿ ಕೆಲ ದಿನಗಳ ಹಿಂದೆ ಚಿರತೆ ಕಾಣಿಸಿಕೊ‌ಡು ನಾಯಿಗಳನ್ನು ತಿಂದು ಹಾಕಿತ್ತು. ಆ ಪರಿಸರದಿಂದ ಚಿರತೆ ಇಲ್ಲಿಗೆ ಬಂದಿರವಹುದು ಎಂಬ ಅನುಮಾನವೂ ವ್ಯಕ್ತವಾಗುತ್ತಿದೆ‌. ಕಾಡುಪ್ರಾಣಿಗಳ ಉಪಟಳದಿಂದಾಗಿ ಸ್ಥಳೀಯ ಜನರು ರಾತ್ರಿಯ ವೇಳೆ ಹಾಗೂ ಬೆಳಗ್ಗಿನ ಜಾವ ಮನೆಗಳಿಂದ ಹೊರ ಬರಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ

Exit mobile version