Site icon Suddi Belthangady

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಆಗಿ ರವೀಂದ್ರ ಶೆಟ್ಟಿ ಬಳಂಜ ಅಧಿಕಾರ ಸ್ವೀಕಾರ

ಉಜಿರೆ: ಬೆಳ್ತಂಗಡಿಯ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕಿನ ಶಾಖಾಧಿಕಾರಿಯಾಗಿ ರವೀಂದ್ರ ಶೆಟ್ಟಿ ಬಳಂಜ ಎ.10 ರಂದು ಅಧಿಕಾರ ಸ್ವೀಕರಿಸಿರುತ್ತಾರೆ.

ಶಾಖಾಧಿಕಾರಿಯಾಗಿ ಭಡ್ತಿ ಹೊಂದಿ ಚಿಕ್ಕಮಗಳೂರು ಶಾಖೆಯಲ್ಲಿ ಕರ್ತವ್ಯ ನಿರ್ವಹಿಸಿ, ಬಳಿಕ ಸಾಗರ ಶಾಖೆಗೆ ವರ್ಗಾವಣೆಗೊಂಡಿದ್ದು ಇದೀಗ ಸಾಗರ ಶಾಖೆಯಿಂದ ಬೆಳ್ತಂಗಡಿ ಶಾಖೆಗೆ ವರ್ಗಾವಣೆ ಹೊಂದಿ ಕರ್ತವ್ಯ ಕ್ಕೆ ಹಾಜರಾಗಿದ್ದಾರೆ.

ಮೂಲತಃ ಉಜಿರೆಯ ಮಂಜುಶ್ರೀ ನಗರ “ಸುರಭಿ “ನಿವಾಸಿ ರವೀಂದ್ರ ಶೆಟ್ಟಿ ಬಳಂಜ ಅವರು 1983ರಲ್ಲಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ಕಾರ್ಕಳ ಶಾಖೆಯಲ್ಲಿ ಉದ್ಯೋಗಕ್ಕೆ ಸೇರಿದ ಅವರು ಬಳಿಕ ಸುಳ್ಯ, ಪುತ್ತೂರು, ಬೈಂದೂರು ಶಾಖೆಗಳಲ್ಲಿ ಸೇವೆ ಸಲ್ಲಿಸಿ ಬಳಿಕ ಅಧಿಕಾರಿಯಾಗಿ ಭಡ್ತಿ ಹೊಂದಿ ಉಡುಪಿ ಶಾಖೆಗೆ ವರ್ಗಾವಣೆಗೊಂಡಿರುತ್ತಾರೆ.ಬೆಳ್ತಂಗಡಿ ಮಂಜುಶ್ರೀ ಜೇಸಿ ಯ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

Exit mobile version