Site icon Suddi Belthangady

ಕಳಿಯ ಪಂ.ಮಾಜಿ ಸದಸ್ಯ ಹಾಗೂ ಶಕ್ತಿ ಕೇಂದ್ರ ಅಧ್ಯಕ್ಷ, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ನ್ಯಾಯತರ್ಪು: ಕಳಿಯ ಗ್ರಾಮ ಪಂಚಾಯತು ಮಾಜಿ ಸದಸ್ಯ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ, ನ್ಯಾಯತರ್ಪು ಗ್ರಾಮದ ಕೆಲವು ಬಿಜೆಪಿ ಕಾರ್ಯಕರ್ತರು ಎ.17 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಕಳಿಯ ಗ್ರಾಮ ಪಂಚಾಯತು ವ್ಯಾಪ್ತಿಯ ನ್ಯಾಯತರ್ಪು ಗ್ರಾಮದ ಮಾಜಿ ಸದಸ್ಯ ತಿಮ್ಮಪ್ಪ ಗೌಡ ಕೆ. ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಗೌಡ ಕೆ ,ನ್ಯಾಯತರ್ಪು ಗ್ರಾಮ ಕಾರ್ಯಕರ್ತ ರಾದ ಸನತ್ ವಂಜಾರೆ, ಯೋಗೀಶ್ ಹಾಕೋಟೆ, ಕೃಷ್ಣಪ್ಪ ಪೆರಾಜೆ, ರಾಜೇಶ್ ನಾಳ, ಹರೀಶ್ ನಾಳ, ನಾಗರಾಜ್ ನಾಳ, ಪ್ರಭಾಕರ ನಾಳ, ಜಯಂತ ಕುಕ್ಕೊಟ್ಟು, ಪ್ರನೀತ್ ನಾಳ, ಹರೀಶ್ ನಾಳ, ಮೋಕ್ಷತ್ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಗುರುವಾಯನಕೆರೆ ಕಿನ್ಯಮ್ಮ ಸಭಾಂಗಣದಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಕೆ ಮತ್ತು ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ,ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್,ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ವಿಧಾನ ಸಭಾ ಮಾಜಿ ಸದಸ್ಯ ಐವನ್ ಡಿ,ಸೋಜ ಮತ್ತು ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ಪಕ್ಷದ ಧ್ವಜವನ್ನು ನೀಡುವ ಮೂಲಕ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಪಕ್ಕಕ್ಕೆ ಬರ ಮಾಡಿ ಕೊಂಡರು.
ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತು ಸದಸ್ಯರಾದ ಅಬ್ದುಲ್ ಕರೀಂ, ಲತೀಪ್ ಪರಿಮ, ಮಾಜಿ ಅಧ್ಯಕ್ಷ ಕೇಶವ ಪೂಜಾರಿ ನಾಳ, ಸತೀಶ್ ನೈಾಕ್ ನಾಳ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version