ಎ.28 ರಿಂದ ಮೇ.02 ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

0

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ 4ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 28ರಿ೦ದ ಮೇ 02ರ ವರೆಗೆ ಜೆಸಿ ಭವನ ಬೆಳ್ತಂಗಡಿಯಲ್ಲಿ ಪೂರ್ವಾಹ್ನ: 9:30ರಿಂದ 4:00ರ ವರೆಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಸುಮಾರು 50 ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದದ್ದು ಆದಷ್ಟು ಬೇಗ ಹೆಸರು ನೊಂದಾಯಿಸಲು ಅವಕಾಶವಿದೆ.

ಶಿಬಿರದಲ್ಲಿ ಕ್ರಾಫ್ಟ್, ಚಿತ್ರಕಲೆ, ಕೊಲಾಜ್ ಗ್ರೀಟಿಂಗ್ ಕಾರ್ಡ್ ತಯಾರಿಕೆ, ಕೇ ಮಾದರಿ ತಯಾರಿ, ಕ್ರಿಯಾನ್ ವರ್ಕ್ಸ್, ಹಾಡು, ಮನೋರಂಜನಾ ಆಟಗಳು, ಜೀವನ ಕೌಶಲ್ಯ ತರಬೇತಿಗಳು, ಹೊರಾಂಗಣ ಪರಿಸರ ಚಟುವಟಿಕೆಗಳು ನಡೆಯಲಿದೆ.ಶಿಬಿರದಲ್ಲಿ ಊಟ, ಉಪಹಾರದ ವ್ಯವಸ್ಥೆಯಿದ್ದು, ಬೇಸಿಗೆ ಶಿಬಿರದ ನಿರ್ದೇಶಕರಾಗಿ ಹೇಮಾವತಿ.ಕೆ ಕಾರ್ಯನಿರ್ವಹಿಸಲಿದ್ದಾರೆಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಶಂಕರ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here