ಎ.22: ಉಜಿರೆಗೆ ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಭೇಟಿ

0

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎ.22 ರಂದು ಬೆಳಿಗ್ಗೆ 10 ಗಂಟೆಗೆ ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ .
ಸಭಾ ಕಾರ್ಯಕ್ರಮದಲ್ಲಿ ಕೆ. ಪಿ. ಸಿ. ಸಿ ಮಾಧ್ಯಮ ವಕ್ತಾರರು, ಕೊಪ್ಪ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನ್ಯಾಯವಾದಿ ಸುಧೀರ್ ಕುಮಾರ್, ಮರೊಳ್ಳಿ ಯವರು ಪ್ರಧಾನ ಭಾಷಣ ಗೈಯಲಿದ್ದಾರೆ.
ಎ. ಐ. ಸಿ. ಸಿ ವೀಕ್ಷಕರಾದ ಶಾಸಕ ಸಂಜೀವ್ ಜೋಸೆಫ್, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ಕೆ. ವಸಂತ ಬಂಗೇರ, ಮಾಜಿ ಸಚಿವರಾದ ಕೆ. ಗಂಗಾಧರ ಗೌಡ, ಕೆ. ಪಿ. ಸಿ. ಸಿ ಸಂಯೋಜಕರಾದ ಶಾಹಿದ್ ತೆಕ್ಕಿಲ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಕೆ. ಶೈಲೇಶ್ ಕುಮಾರ್ ಮತ್ತು ರಂಜನ್ ಜಿ. ಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here