ಬಿಜೆಪಿಯ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್‌ ಪೂಂಜ ಚಾಲನೆ

0

ವೇಣೂರು: 2023ರ ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್‌ ಪೂಂಜ ಅವರು ಇಂದು ಮನೆ ಭೇಟಿಯ ಮೂಲಕ ನಡೆಸಲಾಗುವ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ವೇಣೂರಿನಿಂದ ಪ್ರಚಾರ ಕಾರ್ಯ ಆರಂಭಿಸಿದ ಶಾಸಕರು 10 ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.

ದಿನವಿಡೀ ಶಾಸಕರು ಬಜಿರೆ, ಗುಂಡೂರಿ, ಆರಂಬೋಡಿ, ಹೊಸಂಗಡಿ, ಬಡಕೋಡಿ, ಕಾಶಿಪಟ್ಣ, ಪೆರಾಡಿ, ನಾರಾವಿ, ಕುತ್ಲೂರು, ಕೊಕ್ರಾಡಿ, ಸಾವ್ಯ, ಅಂಡಿಂಜೆ ಗ್ರಾಮಗಳ ಮನೆ ಭೇಟಿ ನಡೆಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿ, ಮೋದಿ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿದರು.

ಮನೆ ಭೇಟಿಯ ಸಂದರ್ಭದಲ್ಲಿ ಶಾಸಕರೊಂದಿಗೆ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಕಾರ್ಯಕರ್ತರು

LEAVE A REPLY

Please enter your comment!
Please enter your name here