ಮಾಜಿ ಸಚಿವ ಗಂಗಾಧರ ಗೌಡರ ಮನೆ, ಕಾಲೇಜು ಮೇಲೆ ಐಟಿ ದಾಳಿ – ಪರಿಶೀಲನೆ

0

ಬೆಳ್ತಂಗಡಿ: ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವಾಗಲೇ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ನಾಯಕ ಮಾಜಿ ಸಚಿವ ಗಂಗಾಧರ ಗೌಡರ ಮನೆ, ಕಾಲೇಜು ಮತ್ತು ತೋಟದ ಮನೆ ಮೇಲೆ ಐಟಿ ದಾಳಿ ನಡೆದಿದೆ.

ಇಂದು ಮುಂಜಾನೆ ಇನೋವಾ ಕಾರಿನಲ್ಲಿ ಪೊಲೀಸರ ಜೊತೆಗೆ ಬಂದ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.


ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಮೇಲೂ ದಾಳಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here