ಬೆಳ್ತಂಗಡಿಯಲ್ಲಿ ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

0

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಉಮೇದುವಾರಿಕೆ ಸಲ್ಲಿಸಿದ್ದವ ಅಭ್ಯರ್ಥಿಗಳ ಪೈಕಿ ಇಬ್ಬರು ಈಗಾಗಲೇ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

ಎಸ್ ಡಿ ಪಿ ಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ.
ಇನ್ನು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸುಬ್ರಹ್ಮಣ್ಯ ಭಟ್ ಕೂಡ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಇನ್ನು ಕೆಲ ನಿಮಿಷಗಳು ಬಾಕಿಯಿದ್ದು ಮತ್ಯಾರು ನಾಮಪತ್ರ ಹಿಂತೆಗೆದುಕೊಳ್ಳುತ್ತಾರೆ ಅನ್ನುವುದು ಕುತೂಹಲ ಕೆರಳಿಸಿದೆ.

LEAVE A REPLY

Please enter your comment!
Please enter your name here