Site icon Suddi Belthangady

ಪುಂಜಾಲಕಟ್ಟೆ: ಸ.ಪ್ರ.ದ.ಕಾಲೇಜಿನಲ್ಲಿ ರಕ್ತದಾನ ಶಿಬಿರ

ಪುಂಜಾಲಕಟ್ಟೆ: ಆಂತರಿಕ ಗುಣಮಟ್ಟ ಭರವಸಾ ಕೋಶ, ಭಾರತೀಯ ಯುವ ರೆಡ್ ಕ್ರಾಸ್, ರಾಷ್ಟೀಯ ಸೇವಾಯೋಜನೆ, ರೋವರ್ಸ್ ಮತ್ತು ರೆಂಜರ್ಸ್, ಹಳೆ ವಿದ್ಯಾರ್ಥಿ ಸಂಘ, ಹಾಗೂ ರೋಟರಿ ಕ್ಲಬ್ ಮಡಂತ್ಯಾರ್ ಇದರ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಎ.26ರಂದು ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಟಿ.ಕೆ ಶರತ್ ಕುಮಾರ್ ಸರ್ ಇವರು ಅಲಂಕರಿಸಿದ್ದರು, ಕಾರ್ಯಕ್ರಮದ ಕುರಿತು ಹಿತನುಡಿಗಳನ್ನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಹರ್ಷ ನಾಯರಾಯಣ ಶೆಟ್ಟಿ, ರೋಟರಿ ಕ್ಲಬ್ ಮಡಂತ್ಯಾರ್ ಇವರು ನೆರವೇರಿಸಿ ಕೊಟ್ಟರು.ರಕ್ತದಾನದ ಕುರಿತು ಜಾಗೃತಿ ಮೂಡಿಸುದರ ಫಲವಾಗಿ ಭಿತ್ತಿ ಪತ್ರವನ್ನು ಅನಾವರಣಗೊಳಿಸಲಾಯಿತು.

ಮುಖ್ಯ ಅತಿಥಿಯಾಗಿ Mr.ಆಂಟೋನಿ ಇವರು ರಕ್ತದಾನದ ಜಾಗೃತಿಯ ಕುರಿತು ಮಾತುಗಳನ್ನಾಡಿದರು.

ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಕ್ರಿಯವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರಲ್ಲದೆ, ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನವನ್ನು ಮಾಡಿದರು.87 ಯೂನಿಟ್ ರಕ್ತದಾನವನ್ನು ಸ.ಪ್ರ.ದರ್ಜೆ ಕಾಲೇಜು ಪುಂಜಾಲಕಟ್ಟೆಯಿಂದ ನೀಡಲಾಯಿತು.

Exit mobile version