Site icon Suddi Belthangady

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

ಬೆಳ್ತಂಗಡಿ:- ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, ಲಾಯಿಲ ಗ್ರಾಮ ಪಂಚಾಯತಿ ಬಿಜೆಪಿ ಮಾಜಿ ಸದಸ್ಯೆ ಶ್ರೀಮತಿ ಬೇಬಿ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ, ಮಹಿಳೆಯರಿಗೆ ಪಕ್ಷ ಹಲವು ಗ್ಯಾರೆಂಟಿಗಳನ್ನು ನೀಡಿರುವ ಕಾರಣ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿಯಲ್ಲಿ ಮಹಿಳೆಯರಿಗೆ ಸ್ಥಾನಮಾನ ಸಿಗುತ್ತಿಲ್ಲ. ದುಡಿದ ಕಾರ್ಯಕರ್ತರಿಗೆ ಮನ್ನಣೆಯಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಶ್ರೀಮತಿ ಬೇಬಿ ಅವರು, ಕ್ಷೇತ್ರದ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಬಾರಿ ರಕ್ಷಿತ್ ಶಿವರಾಂ ಅವರ ಗೆಲುವು ಖಚಿತ ಎಂದು ವಿಸ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರೇವತಿ, ಪಕ್ಷದ ಲಾಯಿಲ ಗ್ರಾಮ ಸಮಿತಿಯ ಅಧ್ಯಕ್ಷರಾದ ಗಿರಿದರ್ ಪೂಜಾರಿ , ಪಕ್ಷದ ಮುಖಂಡರಾದ ಬಿ.ಕೆ ವಸಂತ್ ,ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಕೆ.ಎಚ್ ಖಾಲಿದ್ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version